25.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ 78ನೇ ಸ್ವಾತಂತ್ರ್ಯದಿನಾಚರಣೆ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ 78ನೇ ಸ್ವಾತಂತ್ರ್ಯದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಮಾಧವ ಗೌಡ ಓಣಾಜೆ ಧ್ವಜಾರೋಹಣ ನೆರವೇರಿಸಿದರು.ನಂತರ ವಿದ್ಯಾರ್ಥಿಗಳು,ಪೋಷಕರು ಮೆರವಣಿಗೆಯ ಮೂಲಕ ಸಾಗಿ ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಮಡಿದ ನಾಯಕರಿಗೆ ಜೈಕಾರ ಕೂಗಿದರು. ನಂತರ ನಡೆದ ಸಭಾ ಕಾರ್ಯಕ್ರಮ ದಲ್ಲಿ ಶಾಲೆಗೆ ವಿವಿಧ ಕೊಡುಗೆಗಳನ್ನು ನೀಡಿದ ದಾನಿಗಳನ್ನು ಗೌರವಿಸಲಾಯಿತು. ಶಾಲೆಗೆ ಪ್ರಿಂಟರ್ ಕೊಡುಗೆ ನೀಡಿದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಗೌಡ,ಬ್ಯಾಂಡ್ ಸೆಟ್ ದಾನಿಗಳಾದ ಯೋಗೀಶ್ ಗೌಡ ಸೌತೆಗದ್ದೆ,ಕಂಪ್ಯೂಟರ್ ದಾನಿಗಳಾದ ವಿಜಯ ಗೌಡ ಸೌತೆಗದ್ದೆ,ಸ್ಟೀಲ್ ತಟ್ಟೆ ಮತ್ತು ಲೋಟ ದಾನಿಗಳಾದ ಜಯಣ್ಣ ಗೌಡ ಮಿನಂದೇಲು ಮತ್ತು ರಂಜನ್ ಗೌಡ ಪನ್ನಾಜೆ ಇವರುಗಳನ್ನು ಶಾಲಾ ಪರವಾಗಿ ಗೌರವಿಸಲಾಯಿತು. ವೇದಿಕೆಯಲ್ಲಿ ಗ್ರಾ.ಪಂ.ಸದಸ್ಯರಾದ ಕೃಷ್ಣಯ್ಯ ಆಚಾರ್ಯ,ಸಿ.ಆರ್.ಪಿ.ಶ್ರೀಮತಿ ಪ್ರತಿಮ,ಎಸ್‌.ಕೆ.ಡಿ.ಆರ್.ಪಿ.ಯ ಸೇವಾ ಪ್ರತಿನಿಧಿ ಶ್ರೀಮತಿ ಪ್ರಮೀಳಾ,
ಎಸ್.ಡಿ.ಎಂ.ಸಿ.ಉಪಾಧ್ಯಕ್ಷೆ ಶ್ರೀಮತಿ ಲೇಖಾವತಿ,ಶಾಲಾ ನಾಯಕ ಮನ್ವಿತ್ ಎಂ.ಎಸ್. ಉಪಸ್ಥಿತರಿದ್ದರು.
ಜ್ಙಾನದೀಪ ಶಿಕ್ಷಕರಾದ ಕರಿಯಣ್ಣ ಗೌಡ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಎಂ ವಂದಿಸಿದರು.ಅತಿಥಿ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ಎನ್ ನಿರೂಪಿಸಿದರು.ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು,ಸಿಹಿಯೂಟದೊಂದಿಗೆ ಸಂಪನ್ನಗೊಂಡಿತು.

Related posts

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಉದ್ಘಾಟನಾ ಸಮಾರಂಭ

Suddi Udaya

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಜೂ.30: ಕೌಕ್ರಾಡಿ ಶಾಲಾ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಸೇವಾ ನಿವೃತ್ತಿ

Suddi Udaya

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya
error: Content is protected !!