April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

ಪಟ್ರಮೆ: ತಾವು ಹೊತ್ತ ಕನಸಿನ ಸ್ವತಂತ್ರ ಭಾರತದ ಸ್ಥಾಪನೆಗೆ ಬೇಕಾಗಿ ಅದೆಷ್ಟೋ ತ್ಯಾಗ ಬಲಿದಾನಗಳ ಮೂಲಕ ಹೋರಾಡಿದ ಹಿರಿಯ ಮಹಾತ್ಮರೆಲ್ಲರ ನೆನೆಯುವ ದಿನ ಮತ್ತು ಅವರು ನಡೆದ ದಾರಿಯಲ್ಲಿ ನಡೆಯಲು ಪ್ರೇರಣೆ ನೀಡುವ ದಿನವೇ ಸ್ವಾತಂತ್ರೋತ್ಸವ ಎಂದು ಸಿಐಟಿಯು ನಾಯಕ ಬಿ.ಎಂ.ಭಟ್ ಹೇಳಿದರು.

ಅವರು ಪಟ್ರಮೆಯ ಜುಮ್ಮಾ ಮಸೀದಿಯಲ್ಲಿ ನಡೆದ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣಗೈದು ಮಾತಾಡುತ್ತಿದ್ದರು.

ನಮ್ಮ ಬದುಕಿನ ಮೇಲೆ ಕಾಳಜಿ ಹೊಂದಿ ಪ್ರಜಾಪ್ರಭುತ್ವ ವ್ಯವಸ್ಥೆ ತಂದು ಕೊಟ್ಟದ್ದನ್ನು ಅನುಭವಿಸಿದರೆ ಸಾಲದು, ಆ ಬದುಕನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲೆ ಇದೆ ಎಂದರು.

ಕಾರ್ಯಕ್ರಮದಲ್ಲಿ ಮಸೀದಿ ಅಧ್ಯಕ್ಷ ಮಹಮ್ಮದ್ ಹನೀಫ್, ಕಾರ್ಯದರ್ಶಿ ಅನ್ಸಪ್, ಖಜಾಂಜಿ ಎನ್.ಎಸ್.ನಾಸಿರ್, ಮಹಮ್ಮದ್ ಪಿ, ಸಿಐಟಿಯು ಮುಖಂಡರಾದ ಧನಂಜಯ ಗೌಡ, ಸಿಪಿಐಎಂ ಮುಖಂಡರೂ ಮಾಜಿ ಪಂಚಾಯತು ಸದಸ್ಯರೂ ಆದ ಮಹಮ್ಮದ್ ಅನಸ್, ಮೊದಲಾದವರು ಉಪಸ್ಥಿತರಿದ್ದರು.

ರಾಷ್ಟ್ರಗೀತೆ ಹಾಡಿದ ಬಳಿಕ ಮದರಸದ ಪುಟ್ಟ ವಿದ್ಯಾರ್ಥಿಗಳು ಸಾರೇ ಜಹಾಂಸೆ ಅಚ್ಚಾ ಹಾಡು ಹಾಡಿ ಗಮನ ಸೆಳೆದರು. ಮಸೀದಿಯ ಆವರಣ ತಳಿರು ತೋರಣಗಳಿಂದ ಕಂಗೊಳಿಸುತ್ತಿತ್ತು.

ಮಸೀದಿಯ ಗುರುಗಳಾದ ತಮೀಮ್ ಅನ್ಸಾರಿ ಕುಂಡಾಜೆ(ಖತೀಬರು ಪಟ್ರಮೆ) ಸ್ವಾಗತಿಸಿ, ವಂದಿಸಿದರು.

Related posts

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನ.30: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya
error: Content is protected !!