38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

ಪಟ್ರಮೆ: ತಾವು ಹೊತ್ತ ಕನಸಿನ ಸ್ವತಂತ್ರ ಭಾರತದ ಸ್ಥಾಪನೆಗೆ ಬೇಕಾಗಿ ಅದೆಷ್ಟೋ ತ್ಯಾಗ ಬಲಿದಾನಗಳ ಮೂಲಕ ಹೋರಾಡಿದ ಹಿರಿಯ ಮಹಾತ್ಮರೆಲ್ಲರ ನೆನೆಯುವ ದಿನ ಮತ್ತು ಅವರು ನಡೆದ ದಾರಿಯಲ್ಲಿ ನಡೆಯಲು ಪ್ರೇರಣೆ ನೀಡುವ ದಿನವೇ ಸ್ವಾತಂತ್ರೋತ್ಸವ ಎಂದು ಸಿಐಟಿಯು ನಾಯಕ ಬಿ.ಎಂ.ಭಟ್ ಹೇಳಿದರು.

ಅವರು ಪಟ್ರಮೆಯ ಜುಮ್ಮಾ ಮಸೀದಿಯಲ್ಲಿ ನಡೆದ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣಗೈದು ಮಾತಾಡುತ್ತಿದ್ದರು.

ನಮ್ಮ ಬದುಕಿನ ಮೇಲೆ ಕಾಳಜಿ ಹೊಂದಿ ಪ್ರಜಾಪ್ರಭುತ್ವ ವ್ಯವಸ್ಥೆ ತಂದು ಕೊಟ್ಟದ್ದನ್ನು ಅನುಭವಿಸಿದರೆ ಸಾಲದು, ಆ ಬದುಕನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲೆ ಇದೆ ಎಂದರು.

ಕಾರ್ಯಕ್ರಮದಲ್ಲಿ ಮಸೀದಿ ಅಧ್ಯಕ್ಷ ಮಹಮ್ಮದ್ ಹನೀಫ್, ಕಾರ್ಯದರ್ಶಿ ಅನ್ಸಪ್, ಖಜಾಂಜಿ ಎನ್.ಎಸ್.ನಾಸಿರ್, ಮಹಮ್ಮದ್ ಪಿ, ಸಿಐಟಿಯು ಮುಖಂಡರಾದ ಧನಂಜಯ ಗೌಡ, ಸಿಪಿಐಎಂ ಮುಖಂಡರೂ ಮಾಜಿ ಪಂಚಾಯತು ಸದಸ್ಯರೂ ಆದ ಮಹಮ್ಮದ್ ಅನಸ್, ಮೊದಲಾದವರು ಉಪಸ್ಥಿತರಿದ್ದರು.

ರಾಷ್ಟ್ರಗೀತೆ ಹಾಡಿದ ಬಳಿಕ ಮದರಸದ ಪುಟ್ಟ ವಿದ್ಯಾರ್ಥಿಗಳು ಸಾರೇ ಜಹಾಂಸೆ ಅಚ್ಚಾ ಹಾಡು ಹಾಡಿ ಗಮನ ಸೆಳೆದರು. ಮಸೀದಿಯ ಆವರಣ ತಳಿರು ತೋರಣಗಳಿಂದ ಕಂಗೊಳಿಸುತ್ತಿತ್ತು.

ಮಸೀದಿಯ ಗುರುಗಳಾದ ತಮೀಮ್ ಅನ್ಸಾರಿ ಕುಂಡಾಜೆ(ಖತೀಬರು ಪಟ್ರಮೆ) ಸ್ವಾಗತಿಸಿ, ವಂದಿಸಿದರು.

Related posts

ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಪಡ್ಡಂದಡ್ಕ ಅಬ್ದುಲ್ ರಹಿಮಾನ್ ನಿಧನ

Suddi Udaya

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

Suddi Udaya

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

Suddi Udaya
error: Content is protected !!