23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

ಉಜಿರೆ: ಆಗಸ್ಟ್ 15 ಗುರವಾರ 78 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ಇದರ ವತಿಯಿಂದ ಟಿ. ಬಿ. ಕ್ರಾಸ್ ಜಂಕ್ಷನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಶರೀಫ್ ಎಸ್. ಎಂ (ಅಧ್ಯಕ್ಷರು SDTU ಹಳೆಪೇಟೆ ಉಜಿರೆ) ಹಾಗೂ ಹಿರಿಯರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ಶರೀಫ್ ಎಸ್. ಎಂ (ಅಧ್ಯಕ್ಷರು SDTU ಹಳೆಪೇಟೆ ಉಜಿರೆ) ಬಂದಂತಹ ಎಲ್ಲಾ ಅಥಿತಿಗಳನ್ನು ಮರ್ಷಾದ್ ಉಜಿರೆ ಸ್ವಾಗತಿಸಿ, ಯಸಿರ್ ಫಾಝಿಲ್ ಅಲ್ ಫುರ್ಕಾನಿ (ಮುದರ್ರಿಸರು ಹಾಗೂ ಖತೀಬರು ಎಂ. ಜೆ. ಎಂ ಹಳೆಪೇಟೆ-ಉಜಿರೆ) ಹಿತನುಡಿಗಳೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಖಾದರ್ ಫರಂಗಿಪೇಟೆ (SDTU ರಾಜ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ) ಹಾಗೂ ಶರೀಫ್ ಬೆಳಾಲು ( ಸಾಮಾಜಿಕ ಚಿಂತಕರು, ಮಾಜಿ ಅಧ್ಯಕ್ಷರು-ಚುಟುಕು ಸಾಹಿತ್ಯ ಅಕೇಡೆಮಿ ಬೆಳ್ತಂಗಡಿ ತಾಲೂಕು) ಸಂದೇಶ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಸಾಲಿಹ್ ಮದ್ದಡ್ಕ (ಅಧ್ಯಕ್ಷರು, ಎಸ್. ಡಿ. ಟಿ. ಯೂ ಬೆಳ್ತಂಗಡಿ ಘಟಕ) ಡಾ. ಸೂರ್ಯ ನಾರಾಯಣ (ಚೇತನಾ ಕ್ಲಿನಿಕ್ ಟಿ. ಬಿ. ಕ್ರಾಸ್) ರಫೀಕ್ ಮುಗುಳಿ, ರಶೀದ್ ಶಾಮಿಯಾನ (ಉದ್ಯಮಿಗಳು),ಅಲ್ ಬುಖಾರಿ ಜುಮಾ ಮಸ್ಜಿದ್ ಮಾಜಿ ಅಧ್ಯಕ್ಷರಾದ ಮುಹಮ್ಮದ್ ಕತ್ತಾರ್,ಸಾರ್ವಜನಿಕರು ಹಾಗೂ ಹಿರಿಯರು ಉಪಸ್ಥಿತರಿದ್ದರು.ಹಾಗೂ ವೇದಿಕೆಯಲ್ಲಿ ಇದ್ದಂತಹ ಎಲ್ಲ ಅತಿಥಿಗಳಿಗೆ SDTU ಹಳೆಪೇಟೆ ಸಮಿತಿ ವತಿಯಿಂದ ಸನ್ಮಾನಿಸಲಾಯಿತು .ಕೊನೆಯದಾಗಿ ಸಹಲ್ ನೀರ್ಸಾಲ್ ಧನ್ಯವಾದ ಮಾಡಿದರು.

Related posts

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆಗೆ ಶರಣು

Suddi Udaya

ಗೇರುಕಟ್ಟೆ:52 ವರ್ಷದ ಗಣೇಶೋತ್ಸವ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ವೈ. ಸದಾನಂದ ಶೆಟ್ಟಿ, ಕಾರ್ಯದರ್ಶಿಯಾಗಿ ರಂಜನ್ ಹೆಚ್. ಆಯ್ಕೆ

Suddi Udaya

ಬೆಳ್ತಂಗಡಿ ರಾಮ ಭಕ್ತರಿಂದ ರಾಮೋತ್ಸವ ಸಂಭ್ರಮ: ಅಯೋಧ್ಯ ಕರ ಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆರವರಿಗೆ ಗೌರವಾರ್ಪಣೆ

Suddi Udaya
error: Content is protected !!