23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

ಉಜಿರೆ: ಆಗಸ್ಟ್ 15 ಗುರವಾರ 78 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ಇದರ ವತಿಯಿಂದ ಟಿ. ಬಿ. ಕ್ರಾಸ್ ಜಂಕ್ಷನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಶರೀಫ್ ಎಸ್. ಎಂ (ಅಧ್ಯಕ್ಷರು SDTU ಹಳೆಪೇಟೆ ಉಜಿರೆ) ಹಾಗೂ ಹಿರಿಯರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ಶರೀಫ್ ಎಸ್. ಎಂ (ಅಧ್ಯಕ್ಷರು SDTU ಹಳೆಪೇಟೆ ಉಜಿರೆ) ಬಂದಂತಹ ಎಲ್ಲಾ ಅಥಿತಿಗಳನ್ನು ಮರ್ಷಾದ್ ಉಜಿರೆ ಸ್ವಾಗತಿಸಿ, ಯಸಿರ್ ಫಾಝಿಲ್ ಅಲ್ ಫುರ್ಕಾನಿ (ಮುದರ್ರಿಸರು ಹಾಗೂ ಖತೀಬರು ಎಂ. ಜೆ. ಎಂ ಹಳೆಪೇಟೆ-ಉಜಿರೆ) ಹಿತನುಡಿಗಳೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಖಾದರ್ ಫರಂಗಿಪೇಟೆ (SDTU ರಾಜ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ) ಹಾಗೂ ಶರೀಫ್ ಬೆಳಾಲು ( ಸಾಮಾಜಿಕ ಚಿಂತಕರು, ಮಾಜಿ ಅಧ್ಯಕ್ಷರು-ಚುಟುಕು ಸಾಹಿತ್ಯ ಅಕೇಡೆಮಿ ಬೆಳ್ತಂಗಡಿ ತಾಲೂಕು) ಸಂದೇಶ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಸಾಲಿಹ್ ಮದ್ದಡ್ಕ (ಅಧ್ಯಕ್ಷರು, ಎಸ್. ಡಿ. ಟಿ. ಯೂ ಬೆಳ್ತಂಗಡಿ ಘಟಕ) ಡಾ. ಸೂರ್ಯ ನಾರಾಯಣ (ಚೇತನಾ ಕ್ಲಿನಿಕ್ ಟಿ. ಬಿ. ಕ್ರಾಸ್) ರಫೀಕ್ ಮುಗುಳಿ, ರಶೀದ್ ಶಾಮಿಯಾನ (ಉದ್ಯಮಿಗಳು),ಅಲ್ ಬುಖಾರಿ ಜುಮಾ ಮಸ್ಜಿದ್ ಮಾಜಿ ಅಧ್ಯಕ್ಷರಾದ ಮುಹಮ್ಮದ್ ಕತ್ತಾರ್,ಸಾರ್ವಜನಿಕರು ಹಾಗೂ ಹಿರಿಯರು ಉಪಸ್ಥಿತರಿದ್ದರು.ಹಾಗೂ ವೇದಿಕೆಯಲ್ಲಿ ಇದ್ದಂತಹ ಎಲ್ಲ ಅತಿಥಿಗಳಿಗೆ SDTU ಹಳೆಪೇಟೆ ಸಮಿತಿ ವತಿಯಿಂದ ಸನ್ಮಾನಿಸಲಾಯಿತು .ಕೊನೆಯದಾಗಿ ಸಹಲ್ ನೀರ್ಸಾಲ್ ಧನ್ಯವಾದ ಮಾಡಿದರು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

2025-26 ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ನೆರಿಯ ಬಾಂಜಾರುವಿನಲ್ಲಿ “ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ”

Suddi Udaya

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ದೇವಸ್ಥಾನದ ವತಿಯಿಂದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!