23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

ಬೆಳ್ತಂಗಡಿ: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಬೆಳ್ತಂಗಡಿಯ
ಇಬ್ಬರನ್ನು ಮಂಗಳೂರು ನಗರ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಏರ್‌ಟೆಲ್ ಕಂಪೆನಿಯ 86 ಸಿಮ್‌ಕಾರ್ಡಗಳು, 2 ಮೊಬೈಲ್ ಪೋನ್‌ಗಳು, ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.


ಬೆಳ್ತಂಗಡಿ ತಾಲೂಕಿನ ನಿವಾಸಿ ಗಳಾದ ಶಮದ್ ಮಹಮ್ಮದ್ ಸಮರ್ (26ವ) ಮತ್ತು ಮಹಮ್ಮದ್ ಅಜೀಂ (19ವ) ಬಂಧಿತರು. ಶಮದ್‌ ಮಂಗಳೂರು ನಗರದ ಕಾಲೇಜೊಂದರ ಬಿಬಿಎ ವಿದ್ಯಾರ್ಥಿಯಾಗಿದ್ದು, ಬಾಡಿಗೆ ಮನೆಯಲ್ಲಿದ್ದ. ಮಹಮ್ಮದ್ ಅಜೀಂ ಕೂಡ ಮಂಗಳೂರು ನಗರದಲ್ಲೇ ಬಾಡಿಗೆ ಮನೆಯಲ್ಲಿದ್ದ. ಇವರು ಬೆಳ್ತಂಗಡಿಯ ಮುಸ್ತಾಫ ಮತ್ತು ಮಡಂತ್ಯಾರ್‌ನ ಸಾಜೀದ್‌ನ ಸೂಚನೆಯಂತೆ ತಮ್ಮ ಗೆಳೆಯರು, ಪರಿಚಿತರಿಗೆ, ಸ್ವಲ್ಪ ಹಣ ನೀಡಿ ಪುಸಲಾಯಿಸಿ ಅವರಿಂದ ಸಿಮ್‌ಕಾರ್ಡ್‌ಗಳನ್ನು ಪಡೆದುಕೊಳ್ಳುತ್ತಿದ್ದರು.


ಆರೋಪಿಗಳು ಕಳೆದ ಜನವರಿಯಿಂದಲೇ ಈ ದಂಧೆ ನಡೆಸುತ್ತಿದ್ದು, ಇದುವರೆಗೆ 400 ರಿಂದ 500 ಸಿಮ್ ಕಾರ್ಡ್‌ಗಳನ್ನು ಸಂಗ್ರಹಿಸಿಕೊಟ್ಟಿದ್ದಾರೆ. ತನ್ನ ಗೆಳೆಯರು, ಪರಿಚಿತರಿಗೆ 200ರಿಂದ 300 ರೂ. ನೀಡಿ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಅದನ್ನು ಮುಸ್ತಾಫ ಮತ್ತು ಸಾಜೀದ್‌ಗೆ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದುಬೈ ಹಾಗೂ ಇತರ ಕೆಲವು ದೇಶಗಳಲ್ಲಿರುವ ಸೈಬ‌ರ್ ವಂಚಕರು ಭಾರತದ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಭಾರತೀಯರಿಗೆ ಕೋಟ್ಯಂತರ ರೂಪಾಯಿ ವಂಚಿಸುತ್ತಾರೆ. ಭಾರತೀಯ ಸಿಮ್‌ಗಳಾದರೆ ಆ ಸಂಖ್ಯೆಯನ್ನು ಬಳಸಿ ಭಾರತೀಯರನ್ನು ನಂಬಿಸಿ ವಂಚಿಸುವುದು ಸುಲಭ ಎಂಬುದು ವಂಚಕರ ಲೆಕ್ಕಾಚಾರ ಧರ್ಮಸ್ಥಳ ಪೊಲೀಸರು ಕಳೆದ ಫೆಬ್ರವರಿಯಲ್ಲಿ ಐವರನ್ನು ಬಂಧಿಸಿ ಅವರಿಂದ 42 ಸಿಮ್‌ಾರ್ಡ್ಗಳನ್ನು ವಶಪಡಿಸಿಕೊಂಡಿದ್ದರು.

ಈಗ ಮಂಗಳೂರು ನಗರ ಪೊಲೀಸರು ಬಂಧಿಸಿರುವ ಆರೋಪಿಗಳಿಗೂ ಧರ್ಮಸ್ಥಳದಲ್ಲಿ ಬಂಧಿಸಲ್ಪಟ್ಟಿರುವ ಆರೋಪಿಗಳಿಗೂ ಸಂಪರ್ಕವಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

Suddi Udaya

ಅಳದಂಗಡಿ: “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಗೇರುಕಟ್ಟೆ ಪೇಟೆಯ ಬಳಿಯ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶ ವ ಪತ್ತೆ

Suddi Udaya
error: Content is protected !!