July 24, 2026
Uncategorized

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

ಬೆಳ್ತಂಗಡಿ: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಬೆಳ್ತಂಗಡಿಯ
ಇಬ್ಬರನ್ನು ಮಂಗಳೂರು ನಗರ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಏರ್‌ಟೆಲ್ ಕಂಪೆನಿಯ 86 ಸಿಮ್‌ಕಾರ್ಡಗಳು, 2 ಮೊಬೈಲ್ ಪೋನ್‌ಗಳು, ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.


ಬೆಳ್ತಂಗಡಿ ತಾಲೂಕಿನ ನಿವಾಸಿ ಗಳಾದ ಶಮದ್ ಮಹಮ್ಮದ್ ಸಮರ್ (26ವ) ಮತ್ತು ಮಹಮ್ಮದ್ ಅಜೀಂ (19ವ) ಬಂಧಿತರು. ಶಮದ್‌ ಮಂಗಳೂರು ನಗರದ ಕಾಲೇಜೊಂದರ ಬಿಬಿಎ ವಿದ್ಯಾರ್ಥಿಯಾಗಿದ್ದು, ಬಾಡಿಗೆ ಮನೆಯಲ್ಲಿದ್ದ. ಮಹಮ್ಮದ್ ಅಜೀಂ ಕೂಡ ಮಂಗಳೂರು ನಗರದಲ್ಲೇ ಬಾಡಿಗೆ ಮನೆಯಲ್ಲಿದ್ದ. ಇವರು ಬೆಳ್ತಂಗಡಿಯ ಮುಸ್ತಾಫ ಮತ್ತು ಮಡಂತ್ಯಾರ್‌ನ ಸಾಜೀದ್‌ನ ಸೂಚನೆಯಂತೆ ತಮ್ಮ ಗೆಳೆಯರು, ಪರಿಚಿತರಿಗೆ, ಸ್ವಲ್ಪ ಹಣ ನೀಡಿ ಪುಸಲಾಯಿಸಿ ಅವರಿಂದ ಸಿಮ್‌ಕಾರ್ಡ್‌ಗಳನ್ನು ಪಡೆದುಕೊಳ್ಳುತ್ತಿದ್ದರು.


ಆರೋಪಿಗಳು ಕಳೆದ ಜನವರಿಯಿಂದಲೇ ಈ ದಂಧೆ ನಡೆಸುತ್ತಿದ್ದು, ಇದುವರೆಗೆ 400 ರಿಂದ 500 ಸಿಮ್ ಕಾರ್ಡ್‌ಗಳನ್ನು ಸಂಗ್ರಹಿಸಿಕೊಟ್ಟಿದ್ದಾರೆ. ತನ್ನ ಗೆಳೆಯರು, ಪರಿಚಿತರಿಗೆ 200ರಿಂದ 300 ರೂ. ನೀಡಿ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಅದನ್ನು ಮುಸ್ತಾಫ ಮತ್ತು ಸಾಜೀದ್‌ಗೆ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದುಬೈ ಹಾಗೂ ಇತರ ಕೆಲವು ದೇಶಗಳಲ್ಲಿರುವ ಸೈಬ‌ರ್ ವಂಚಕರು ಭಾರತದ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಭಾರತೀಯರಿಗೆ ಕೋಟ್ಯಂತರ ರೂಪಾಯಿ ವಂಚಿಸುತ್ತಾರೆ. ಭಾರತೀಯ ಸಿಮ್‌ಗಳಾದರೆ ಆ ಸಂಖ್ಯೆಯನ್ನು ಬಳಸಿ ಭಾರತೀಯರನ್ನು ನಂಬಿಸಿ ವಂಚಿಸುವುದು ಸುಲಭ ಎಂಬುದು ವಂಚಕರ ಲೆಕ್ಕಾಚಾರ ಧರ್ಮಸ್ಥಳ ಪೊಲೀಸರು ಕಳೆದ ಫೆಬ್ರವರಿಯಲ್ಲಿ ಐವರನ್ನು ಬಂಧಿಸಿ ಅವರಿಂದ 42 ಸಿಮ್‌ಾರ್ಡ್ಗಳನ್ನು ವಶಪಡಿಸಿಕೊಂಡಿದ್ದರು.

ಈಗ ಮಂಗಳೂರು ನಗರ ಪೊಲೀಸರು ಬಂಧಿಸಿರುವ ಆರೋಪಿಗಳಿಗೂ ಧರ್ಮಸ್ಥಳದಲ್ಲಿ ಬಂಧಿಸಲ್ಪಟ್ಟಿರುವ ಆರೋಪಿಗಳಿಗೂ ಸಂಪರ್ಕವಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ವಿತರಣೆ

Suddi Udaya

ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್-ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ ಸಾರಿಗೆ ಸಚಿವರಿಗೆ ಮನವಿ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು-ಮಲವಂತಿಗೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕ ಬ್ರಹ್ಮಶ್ರೀ ಗುರು ಭವನ ಉದ್ಘಾಟನೆ

Suddi Udaya

ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್ ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಮನವಿ

Suddi Udaya
error: Content is protected !!