38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

ಬೆಳ್ತಂಗಡಿ: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಬೆಳ್ತಂಗಡಿಯ
ಇಬ್ಬರನ್ನು ಮಂಗಳೂರು ನಗರ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಏರ್‌ಟೆಲ್ ಕಂಪೆನಿಯ 86 ಸಿಮ್‌ಕಾರ್ಡಗಳು, 2 ಮೊಬೈಲ್ ಪೋನ್‌ಗಳು, ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.


ಬೆಳ್ತಂಗಡಿ ತಾಲೂಕಿನ ನಿವಾಸಿ ಗಳಾದ ಶಮದ್ ಮಹಮ್ಮದ್ ಸಮರ್ (26ವ) ಮತ್ತು ಮಹಮ್ಮದ್ ಅಜೀಂ (19ವ) ಬಂಧಿತರು. ಶಮದ್‌ ಮಂಗಳೂರು ನಗರದ ಕಾಲೇಜೊಂದರ ಬಿಬಿಎ ವಿದ್ಯಾರ್ಥಿಯಾಗಿದ್ದು, ಬಾಡಿಗೆ ಮನೆಯಲ್ಲಿದ್ದ. ಮಹಮ್ಮದ್ ಅಜೀಂ ಕೂಡ ಮಂಗಳೂರು ನಗರದಲ್ಲೇ ಬಾಡಿಗೆ ಮನೆಯಲ್ಲಿದ್ದ. ಇವರು ಬೆಳ್ತಂಗಡಿಯ ಮುಸ್ತಾಫ ಮತ್ತು ಮಡಂತ್ಯಾರ್‌ನ ಸಾಜೀದ್‌ನ ಸೂಚನೆಯಂತೆ ತಮ್ಮ ಗೆಳೆಯರು, ಪರಿಚಿತರಿಗೆ, ಸ್ವಲ್ಪ ಹಣ ನೀಡಿ ಪುಸಲಾಯಿಸಿ ಅವರಿಂದ ಸಿಮ್‌ಕಾರ್ಡ್‌ಗಳನ್ನು ಪಡೆದುಕೊಳ್ಳುತ್ತಿದ್ದರು.


ಆರೋಪಿಗಳು ಕಳೆದ ಜನವರಿಯಿಂದಲೇ ಈ ದಂಧೆ ನಡೆಸುತ್ತಿದ್ದು, ಇದುವರೆಗೆ 400 ರಿಂದ 500 ಸಿಮ್ ಕಾರ್ಡ್‌ಗಳನ್ನು ಸಂಗ್ರಹಿಸಿಕೊಟ್ಟಿದ್ದಾರೆ. ತನ್ನ ಗೆಳೆಯರು, ಪರಿಚಿತರಿಗೆ 200ರಿಂದ 300 ರೂ. ನೀಡಿ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಅದನ್ನು ಮುಸ್ತಾಫ ಮತ್ತು ಸಾಜೀದ್‌ಗೆ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದುಬೈ ಹಾಗೂ ಇತರ ಕೆಲವು ದೇಶಗಳಲ್ಲಿರುವ ಸೈಬ‌ರ್ ವಂಚಕರು ಭಾರತದ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಭಾರತೀಯರಿಗೆ ಕೋಟ್ಯಂತರ ರೂಪಾಯಿ ವಂಚಿಸುತ್ತಾರೆ. ಭಾರತೀಯ ಸಿಮ್‌ಗಳಾದರೆ ಆ ಸಂಖ್ಯೆಯನ್ನು ಬಳಸಿ ಭಾರತೀಯರನ್ನು ನಂಬಿಸಿ ವಂಚಿಸುವುದು ಸುಲಭ ಎಂಬುದು ವಂಚಕರ ಲೆಕ್ಕಾಚಾರ ಧರ್ಮಸ್ಥಳ ಪೊಲೀಸರು ಕಳೆದ ಫೆಬ್ರವರಿಯಲ್ಲಿ ಐವರನ್ನು ಬಂಧಿಸಿ ಅವರಿಂದ 42 ಸಿಮ್‌ಾರ್ಡ್ಗಳನ್ನು ವಶಪಡಿಸಿಕೊಂಡಿದ್ದರು.

ಈಗ ಮಂಗಳೂರು ನಗರ ಪೊಲೀಸರು ಬಂಧಿಸಿರುವ ಆರೋಪಿಗಳಿಗೂ ಧರ್ಮಸ್ಥಳದಲ್ಲಿ ಬಂಧಿಸಲ್ಪಟ್ಟಿರುವ ಆರೋಪಿಗಳಿಗೂ ಸಂಪರ್ಕವಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ : ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ: ಎಸ್.ಡಿ.ಪಿ.ಐ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯ ಬಿತ್ತಿ ಪತ್ರ ಅನಾವರಣ

Suddi Udaya
error: Content is protected !!