23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

ಬೆಳ್ತಂಗಡಿ: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಬೆಳ್ತಂಗಡಿಯ
ಇಬ್ಬರನ್ನು ಮಂಗಳೂರು ನಗರ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಏರ್‌ಟೆಲ್ ಕಂಪೆನಿಯ 86 ಸಿಮ್‌ಕಾರ್ಡಗಳು, 2 ಮೊಬೈಲ್ ಪೋನ್‌ಗಳು, ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.


ಬೆಳ್ತಂಗಡಿ ತಾಲೂಕಿನ ನಿವಾಸಿ ಗಳಾದ ಶಮದ್ ಮಹಮ್ಮದ್ ಸಮರ್ (26ವ) ಮತ್ತು ಮಹಮ್ಮದ್ ಅಜೀಂ (19ವ) ಬಂಧಿತರು. ಶಮದ್‌ ಮಂಗಳೂರು ನಗರದ ಕಾಲೇಜೊಂದರ ಬಿಬಿಎ ವಿದ್ಯಾರ್ಥಿಯಾಗಿದ್ದು, ಬಾಡಿಗೆ ಮನೆಯಲ್ಲಿದ್ದ. ಮಹಮ್ಮದ್ ಅಜೀಂ ಕೂಡ ಮಂಗಳೂರು ನಗರದಲ್ಲೇ ಬಾಡಿಗೆ ಮನೆಯಲ್ಲಿದ್ದ. ಇವರು ಬೆಳ್ತಂಗಡಿಯ ಮುಸ್ತಾಫ ಮತ್ತು ಮಡಂತ್ಯಾರ್‌ನ ಸಾಜೀದ್‌ನ ಸೂಚನೆಯಂತೆ ತಮ್ಮ ಗೆಳೆಯರು, ಪರಿಚಿತರಿಗೆ, ಸ್ವಲ್ಪ ಹಣ ನೀಡಿ ಪುಸಲಾಯಿಸಿ ಅವರಿಂದ ಸಿಮ್‌ಕಾರ್ಡ್‌ಗಳನ್ನು ಪಡೆದುಕೊಳ್ಳುತ್ತಿದ್ದರು.


ಆರೋಪಿಗಳು ಕಳೆದ ಜನವರಿಯಿಂದಲೇ ಈ ದಂಧೆ ನಡೆಸುತ್ತಿದ್ದು, ಇದುವರೆಗೆ 400 ರಿಂದ 500 ಸಿಮ್ ಕಾರ್ಡ್‌ಗಳನ್ನು ಸಂಗ್ರಹಿಸಿಕೊಟ್ಟಿದ್ದಾರೆ. ತನ್ನ ಗೆಳೆಯರು, ಪರಿಚಿತರಿಗೆ 200ರಿಂದ 300 ರೂ. ನೀಡಿ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಅದನ್ನು ಮುಸ್ತಾಫ ಮತ್ತು ಸಾಜೀದ್‌ಗೆ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದುಬೈ ಹಾಗೂ ಇತರ ಕೆಲವು ದೇಶಗಳಲ್ಲಿರುವ ಸೈಬ‌ರ್ ವಂಚಕರು ಭಾರತದ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಭಾರತೀಯರಿಗೆ ಕೋಟ್ಯಂತರ ರೂಪಾಯಿ ವಂಚಿಸುತ್ತಾರೆ. ಭಾರತೀಯ ಸಿಮ್‌ಗಳಾದರೆ ಆ ಸಂಖ್ಯೆಯನ್ನು ಬಳಸಿ ಭಾರತೀಯರನ್ನು ನಂಬಿಸಿ ವಂಚಿಸುವುದು ಸುಲಭ ಎಂಬುದು ವಂಚಕರ ಲೆಕ್ಕಾಚಾರ ಧರ್ಮಸ್ಥಳ ಪೊಲೀಸರು ಕಳೆದ ಫೆಬ್ರವರಿಯಲ್ಲಿ ಐವರನ್ನು ಬಂಧಿಸಿ ಅವರಿಂದ 42 ಸಿಮ್‌ಾರ್ಡ್ಗಳನ್ನು ವಶಪಡಿಸಿಕೊಂಡಿದ್ದರು.

ಈಗ ಮಂಗಳೂರು ನಗರ ಪೊಲೀಸರು ಬಂಧಿಸಿರುವ ಆರೋಪಿಗಳಿಗೂ ಧರ್ಮಸ್ಥಳದಲ್ಲಿ ಬಂಧಿಸಲ್ಪಟ್ಟಿರುವ ಆರೋಪಿಗಳಿಗೂ ಸಂಪರ್ಕವಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ರವರಿಗೆ ಸನ್ಮಾನ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕ. ಧರ್ಮಸ್ಥಳ ಕನ್ಯಾಡಿ ನಿವಾಸಿ ಪಣಿರಾಜ್ ನಿಧನ

Suddi Udaya

ಬೈಕ್ ಕಳ್ಳತನ ಆರೋಪಿಯ ಬಂಧನ

Suddi Udaya

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!