ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya

ವೀರ ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಎದುರು ಧ್ವಜಾರೋಹಣ ನಡೆಸುವುದರ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಯೋಗಿಶ್ ಶೆಟ್ಟಿ, ಡಿ.ಬಿ. ಬಾಲಕೃಷ್ಣ, ಪೂರ್ಣಿಮಾ ಕೆ.ಎಂ, ಸುಂದರ್ ಗೌಡ, ಕೇಶವ ಗೌಡ, ಗರುದೇವ ಯು.ಬಿ, ಡಾ. ಸಚಿನ್ ನಡ್ಕ, ಕುಸುಮಾಧರ, ಸಾರಿಕಾ ಸುರೇಶ್, ನವೀನ್ ಚಿಲ್ಪಾರ್, ರಾಮಚಂದ್ರ ಕೆ, ವಾಸುದೇವ ವಕೀಲರು ಪಾಲ್ಗೊಂಡಿದ್ದರು.

ಒಕ್ಕಲಿಗರ ಗೌಡ ಸೇವಾ ಸಂಘದ ಪದಾಧಿಕಾರಿಗಳು, ನಿರ್ದೇಶಕರು, ಮಹಿಳಾ ಘಟಕದ ಹಾಗೂ ಯುವ ಘಟಕದ ಪದಾಧಿಕಾರಿಗಳು, ನಿರ್ದೇಶಕರು ಮತ್ತು ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿ ಪದಾಧಿಕಾರಿಗಳು, ನಿರ್ದೇಶಕರು ಭಾಗವಹಿಸಿದ್ದರು.

ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನಾ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಪುತ್ತಿಲ ಸ್ವಾಗತಿಸಿದರು. ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಪ್ರಸ್ತಾವಿಕವಾಗಿ ಮಾತನಾಡಿದರು. ಕಿರಣ್ ಹೊಸಳಿಕೆ ಧನ್ಯವಾದ ಸಲ್ಲಿಸಿದರು. ಮೋನಪ್ಪ ಗೌಡ ಧ್ವಜಾರೋಹಣ ಕಾರ್ಯಕ್ರಮ ನಿರ್ವಹಿಸಿದರು. ಕು| ದಕ್ಷಾ ಸಾಂತಪ್ಪ ಪ್ರಾರ್ಥಿಸಿದರು, ಇಂದ್ರಾವತಿಯವರು ಕಾರ್ಯಕ್ರಮ ನಿರೂಪಿಸಿದರು.

Leave a Comment

error: Content is protected !!