September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

ವೀರ ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಎದುರು ಧ್ವಜಾರೋಹಣ ನಡೆಸುವುದರ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಯೋಗಿಶ್ ಶೆಟ್ಟಿ, ಡಿ.ಬಿ. ಬಾಲಕೃಷ್ಣ, ಪೂರ್ಣಿಮಾ ಕೆ.ಎಂ, ಸುಂದರ್ ಗೌಡ, ಕೇಶವ ಗೌಡ, ಗರುದೇವ ಯು.ಬಿ, ಡಾ. ಸಚಿನ್ ನಡ್ಕ, ಕುಸುಮಾಧರ, ಸಾರಿಕಾ ಸುರೇಶ್, ನವೀನ್ ಚಿಲ್ಪಾರ್, ರಾಮಚಂದ್ರ ಕೆ, ವಾಸುದೇವ ವಕೀಲರು ಪಾಲ್ಗೊಂಡಿದ್ದರು.

ಒಕ್ಕಲಿಗರ ಗೌಡ ಸೇವಾ ಸಂಘದ ಪದಾಧಿಕಾರಿಗಳು, ನಿರ್ದೇಶಕರು, ಮಹಿಳಾ ಘಟಕದ ಹಾಗೂ ಯುವ ಘಟಕದ ಪದಾಧಿಕಾರಿಗಳು, ನಿರ್ದೇಶಕರು ಮತ್ತು ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿ ಪದಾಧಿಕಾರಿಗಳು, ನಿರ್ದೇಶಕರು ಭಾಗವಹಿಸಿದ್ದರು.

ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನಾ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಪುತ್ತಿಲ ಸ್ವಾಗತಿಸಿದರು. ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಪ್ರಸ್ತಾವಿಕವಾಗಿ ಮಾತನಾಡಿದರು. ಕಿರಣ್ ಹೊಸಳಿಕೆ ಧನ್ಯವಾದ ಸಲ್ಲಿಸಿದರು. ಮೋನಪ್ಪ ಗೌಡ ಧ್ವಜಾರೋಹಣ ಕಾರ್ಯಕ್ರಮ ನಿರ್ವಹಿಸಿದರು. ಕು| ದಕ್ಷಾ ಸಾಂತಪ್ಪ ಪ್ರಾರ್ಥಿಸಿದರು, ಇಂದ್ರಾವತಿಯವರು ಕಾರ್ಯಕ್ರಮ ನಿರೂಪಿಸಿದರು.

Related posts

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

Suddi Udaya

ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನಕ್ಕೆ ನಟ ಶನಿಲ್ ಗೌತಮ್ ಭೇಟಿ

Suddi Udaya

ಮಾ. 22 : ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ ಉಜಿರೆಯ ರಥಬೀದಿಯಲ್ಲಿ ಅದ್ದೂರಿಯ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಕೊಕ್ಕಡ: 68ನೇ ವರ್ಷದ ನಗರ ಭಜನೆ ಸಪ್ತಾಹದ ಶೋಭಾಯಾತ್ರೆಯಲ್ಲಿ ಗಮನ ಸೆಳೆದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ

Suddi Udaya

ಉಜಿರೆ: ಭಜಕೆರೆ ಗೊಬ್ಬು-2025 ಸಮಾರೋಪ ಸಮಾರಂಭ

Suddi Udaya

ಭಾರಿ ಮಳೆಗೆ ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಒಳಗೆ ಹಾಗೂ ಮನೆಗೆ ನುಗ್ಗಿದ ನೀರು

Suddi Udaya
error: Content is protected !!