30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿಶಾಲಾ ಕಾಲೇಜು

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

ನಡ: ನಮ್ಮ ಪೂರ್ವಜರಿಗೆ ಆಟಿ ತಿಂಗಳ ಬದುಕು ಆರ್ಥಿಕವಾಗಿ ಬಹಳ ಸಂಕಷ್ಟದ ಬದುಕು. ರೋಗ ರುಜಿನಗಳು ಕಾಡುವ ಕಾಲ. ಇಡೀ ವರ್ಷದಲ್ಲಿ ಬರುವ ಕಾಯಿಲೆ ಕಸಾಲೆಗಳನ್ನು ಪರಿಹರಿಸುವ ಶಕ್ತಿ ಸತ್ವವನ್ನು ಅವರು ಪಾಲೆಕೆತ್ತೆಯಲ್ಲಿ ಗುರುತಿಸಿ ಬಳಸಿ ನಿರೋಗಿಗಳಾದರು. ಇದು ಮೂಢನಂಬಿಕೆ ಅಲ್ಲ. ಮೂಲ ನಂಬಿಕೆ” ಎಂದು ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ತಿಳಿಸಿದರು.

ಅವರು ಸರಕಾರಿ ಪದವಿ ಪೂರ್ವ ಕಾಲೇಜಿನ ಆಟಿಡೊಂಜಿ ಕೂಟ ಕಾರ್ಯಕ್ರಮದ ಉದ್ಘಾಟನೆಯನ್ನು ಭತ್ತದ ಕಳಸೆಯಲ್ಲಿ ತೆಂಗಿನ ಸಿರಿಯನ್ನು ಅರಳಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ವಹಿಸಿ “ಹಳೇ ಕಾಲದ ಸಂಪ್ರದಾಯಗಳಲ್ಲಿ ಸತ್ವವೂ ಇದೆ. ವೈಜ್ಞಾನಿಕತೆಯೂ ಇದೆ. ಇದನ್ನು ಮುಂದುವರೆಸಿಕೊಂಡು ಹೋಗುವುದರಲ್ಲಿ ನಮ್ಮ ಬದುಕಿನ ಸಾರ್ಥಕತೆ ಇದೆ” ಎಂದು ಕರೆ ನೀಡಿದರು.

ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ, ಕೊಯ್ಯೂರು ಸ.ಪ.ಪೂ.ಕಾಲೇಜಿನ ಪ್ರಭಾರ ಪ್ರಾಂಶುಪಾಲ ಮೋಹನ್ ಗೌಡ, ಹಿರಿಯ ಉಪನ್ಯಾಸಕಿ ಶ್ರೀಮತಿ ಲಿಲ್ಲಿ ಪಿ.ವಿ., ಕಾಲೇಜು ನಾಯಕ ರಕ್ಷಿತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀಮತಿ ಸುಕೇತ ಸ್ವಾಗತಿಸಿ, ಶ್ರೀಮತಿ ಪವಿತ್ರ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಚೇತನಿ ವಂದಿಸಿದರು.

ಈ ಸಂದರ್ಭದಲ್ಲಿ ಯದುಪತಿ ಗೌಡ ರವರನ್ನು ಸನ್ಮಾನಿಸಲಾಯಿತು. ಸನ್ಮಾನಿತರ ಪರಿಚಯವನ್ನು ಶ್ರೀಮತಿ ವಸಂತಿ ಪಿ. ನಿರ್ವಹಿಸಿದರು.

Related posts

ಉಜಿರೆ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ ) ಬಳ್ಳಮಂಜ ಇದರ ವತಿಯಿಂದ 30 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ: ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

Suddi Udaya
error: Content is protected !!