July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮ

ಉಜಿರೆ: ವಿಶ್ವ ಹಿಂದೂ ಪರಿಷದ್, ಬಜರಂಗದಳ, ದುರ್ಗಾವಾಹಿನಿ, ಮಾತೃಶಕ್ತಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮವು ಆ.೧೪ರಂದು ಉಜಿರೆ ಶಾರದಾ ಮಂಟಪದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮ ನಡೆಯಿತು

ದೀಪ ಪ್ರಜ್ವಲಿಸುವ ಮೂಲಕ ಛತ್ರಪತಿ ಶಿವಾಜಿ ಭಜನಾ ಮಂಡಳಿ ಉಜಿರೆ ಮತ್ತು ಮತ್ತೂರು ಪಂಚಲಿಂಗೇಶ್ವರ ಭಜನಾ ಮಂಡಳಿ ಚಾರ್ಮಾಡಿ ಇವರಿಂದ ಕುಣಿತ ಭಜನಾ ನಡೆಯಿತು ಭಾರತ ಮಾತೆಗೆ ಪುಷ್ಪಾರ್ಚನೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಕಾರ ಭಾರತಿ ಬೆಳ್ತಂಗಡಿಯ ಅಧ್ಯಕ್ಷ ಸಂಪತ್ ಬಿ. ಸುವರ್ಣ ವಹಿಸಿದ್ದರು. ಸುನೀಲ್ ಕೆ.ಆರ್. ಪ್ರಾಂತ ಧರ್ಮ ಪ್ರಚಾರ ಪ್ರಮುಖ್ ವಿಶ್ವ ಹಿಂದೂ ಪರಿಷತ್ ದಿಕ್ಸೂಚಿ ಭಾಷಣ ಮಾಡಿದರು.

ಪುತ್ತೂರು ವಿ.ಹಿಂ.ಪ ಅಧ್ಯಕ್ಷ ಗುರು ಬಂಟ್ವಾಳ, ವಿ.ಹಿಂ.ಪ.ಬೆಳ್ತಂಗಡಿ ಪ್ರಖಂಡ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಬಜರಂಗದಳ ಬೆಳ್ತಂಗಡಿ ಪ್ರಖಂಡ ಸಂಚಾಲಕ ಸಂತೋಷ್ ಅತ್ತಾಜೆ, ಪದ್ಮನಾಭ ಶೆಟ್ಟಿಗಾರ್ ಉದ್ಯಮಿಗಳು ಉಜಿರೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸತೀಶ್ ನೆರಿಯ ಉಪಾಧ್ಯಕ್ಷರು ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡ, ಮೋಹನ್ ಬೆಳ್ತಂಗಡಿ ಕಾರ್ಯದರ್ಶಿ ವಿ,ಹಿಂ.ಪ ಬೆಳ್ತಂಗಡಿ ಪ್ರಖಂಡ, ರಮೇಶ್ ಧರ್ಮಸ್ಥಳ ಗೋ ರಕ್ಷಾ ಪ್ರಮುಖ್ ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡ, ಅನಂತು ಉಜಿರೆ ಗೋ ರಕ್ಷಾ ಪ್ರಮುಖ್ ಬಜರಂಗದಳ ಬೆಳ್ತಂಗಡಿ ಪ್ರಖಂಡ, ನಾಗೇಶ್ ಕಲ್ಮಂಜ ಪ್ರಚಾರ ಮತ್ತು ಪ್ರಸಾರ ಪ್ರಮುಖ್ ವಿ.ಹಿಂ.ಪ ಬಜರಂಗದಳ ಬೆಳ್ತಂಗಡಿ ಪ್ರಖಂಡ ಹಾಗೂ ಹಿಂದೂ ಕಾರ್ಯಕರ್ತರು ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಕಾರ್ಯಕರ್ತರು ಭಾಗವಹಿಸಿದ್ದರು

ಕಾರ್ಯಕ್ರಮದಲ್ಲಿ ಭಜನಾ ತಂಡಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು ಸಭಾ ಕಾರ್ಯಕ್ರಮದ ಬಳಿಕ ಉಜಿರೆ ಪೇಟೆಯಲ್ಲಿ ಜೈಕಾರದೊಂದಿಗೆ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಕಾರ್ಯಕ್ರಮದ ಕೊನೆಯದಾಗಿ ಉಜಿರೆ ಪೇಟೆಯಲ್ಲಿ ಜಗನ್ನಾಥ ಶೆಟ್ಟಿ ನಿವೃತ್ತ ಯೋಧರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು

ಮೋಹನ್ ಬೆಳ್ತಂಗಡಿ ಕಾರ್ಯದರ್ಶಿ ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡ ಕಾರ್ಯಕ್ರಮ ನಿರೂಪಿಸಿದರು.

Related posts

ಲಾಯಿಲ ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪಿಡಬ್ಲ್ಯೂಡಿ ಗುತ್ತಿಗೆದಾರ ಮಹಮ್ಮದ್ ಮದ್ದಡ್ಕ ಅಸೌಖ್ಯದಿಂದ ನಿಧನ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya

ಅಂತಾರಾಷ್ಟ್ರೀಯ ಕಾರ್ಯಾಗಾರಕ್ಕೆ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿಯರು

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya
error: Content is protected !!