May 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಇಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು.

ಧ್ವಜಾರೋಹಣ ಕಾರ್ಯಕ್ರಮವನ್ನು ಮಂಜೊಟ್ಟಿ ಹೋಲಿ ಕ್ರಾಸ್ ಚರ್ಚ್ ಇಲ್ಲಿಯ ಫಾ! ಪ್ರವೀಣ್ ಡಿ’ಸೋಜಾ ನೆರೆವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಲಂಕರಿಸಿದ್ದ ಶಾಲಾ ಆಡಳಿತ ಟ್ರಸ್ಟಿನ ಅಧ್ಯಕ್ಷ ಜನಾಬ್ ಸೈಯದ್ ಹಬೀಬ್ ಮಾತನಾಡಿ ಸಮಾಜದಲ್ಲಿ ನಡೆಯುವ ಅನ್ಯಾಯ ಅಸಮಾನತೆಯನ್ನು ಕಿತ್ತೊಗೆಯುವಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕು ಹಾಗೂ ಭಾರತೀಯರಾದ ನಾವು ಒಂದೇ ತಾಯಿಯ ಮಕ್ಕಳಂತೆ ಬದುಕು ನಡೆಸಬೇಕು ಎಂದರು.

ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಸೈಯದ್ ಆಯ್ಯುಬ್, ಕೋಶಾಧಿಕಾರಿ ಸೈಯದ್ ಇರ್ಫಾನ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್, ಶಾಲಾ ಅರೇಬಿಕ್ ಶಿಕ್ಷಣ ವಿಭಾಗದ ಮುಖ್ಯ ಗುರುಗಳಾದ ಅಬ್ದುಲ್ ರಝಾಕ್ ಇಮ್ದಾದಿ, ಅರೇಬಿಕ್ ಶಿಕ್ಷಣದ ಗುರುಗಳಾದ ಯಾಕೂಬ್ ಮದನಿ, ಆಡಳಿತ ಮಂಡಳಿಯ ಸದಸ್ಯ ಶೇಖ್ ಅಬ್ದುಲ್ ಗಫೂರ್, ಸ್ಥಳೀಯರಾದ ಮುನಿರಾಜ ಅಜ್ರಿ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಬಹಳ ಸುಂದರವಾದ ಪಥ ಸಂಚಲನ ಕಾರ್ಯಕ್ರಮವನ್ನು ನೆರವೇರಿಸಿದರು. ಶಾಲೆಯ ಪುಟಾಣಿ ಮಕ್ಕಳಿಂದ ನಡೆದ ಭಾರತೀಯ ಘನತೆಯನ್ನು ಸಾರುವ ವಿವಿಧ ಘಟನಾವಳಿಗಳ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ವಿದ್ಯಾರ್ಥಿಗಳ ಪೋಷಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಕಾರಣರಾದರು. ವಿದ್ಯಾರ್ಥಿಗಳಾದ ಹುಸ್ನಾ ಬೇಗಂ ಕಾರ್ಯಕ್ರಮವನ್ನು ನಿರೂಪಿಸಿದರು. ಮೊಹಮ್ಮದ್ ಝಿಶಾನ್ ಸ್ವಾಗತಿಸಿದರು. ಫಿದಾ ಧನ್ಯವಾದ ನೆರವೇರಿಸಿದರು

Related posts

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿಗೆ ಶೇ.96.15 ಫಲಿತಾಂಶ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya
error: Content is protected !!