30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ಇದರ ನೇತೃತ್ವದಲ್ಲಿ ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳಿಗೋಸ್ಕರ ನಡೆಸುತ್ತಿರುವ ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಇದರ ಅಡಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಎಸ್.ಎಂ.ವೈ.ಎಂ ಧರ್ಮಪ್ರಾಂತ್ಯ ಬೆಳ್ತಂಗಡಿ, ಕೃಪ ಸ್ವ-ಸಹಾಯ ಸಂಘ ತೋಟತ್ತಾಡಿ ಇವುಗಳ ಸಹಕಾರದೊಂದಿಗೆ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಎಸ್.ಎಂ.ವೈ .ಎಂ, ಮಾತೃವೇದಿ, ಫ್ಯಾಮಿಲಿ ಅಪೋಸ್ಟೆಲೆಟ್ ಬೆಳ್ತಂಗಡಿ ಸಂಘಟನೆಗಳ ನಿರ್ದೇಶಕ ವಂ.ಫಾದರ್ ಜೋಬಿ ಪುಲ್ಲಾಟ್ ಶೋಷಿತ ವರ್ಗದವರಿಗೋಸ್ಕರ ಸಂಸ್ಥೆಯು ಮಾಡುತ್ತಿರುವ ಕೆಲಸ ಕಾರ್ಯಗಳನ್ನು ಅಭಿನಂದಿಸುತ್ತಾ, ಜೀವನದಲ್ಲಿ ಪರಸ್ಪರ ಜೊತೆಯಾಗಿ ನಿಲ್ಲುವ ಮೂಲಕ ವಂಚಿತರಾಗುತ್ತಿರುವ ವ್ಯಕ್ತಿಗಳ ಹಕ್ಕುಗಳಿಗೋಸ್ಕರ ಪ್ರವೃತಿಸಬೇಕೆಂದು ಕರೆ ನೀಡಿದರು.

ನೂತನವಾಗಿ ಎಸ್.ಎಂ.ವೈ.ಎಂ ಬೆಳ್ತಂಗಡಿ ಧರ್ಮಪ್ರಂತ್ಯದ ಅಧ್ಯಕ್ಷ ಸಿರಿನ್ ತೋಮಸ್ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮರನ್ನು ಸ್ಮರಿಸುತ್ತಾ, ಭಾರತೀಯರು ನಿಷ್ಠಾವಂತ ಪ್ರಜೆಗಳಾಗಿ ಬದುಕುವ ಮೂಲಕ ಸಮಾಜದ ಯಶಸ್ವಿಗೆ ಕಾರಣರಾಗಬೇಕು ಎಂದು ಕರೆ ನೀಡಿದರು.

ಕೃಪ ಸಂಘ ತೋಟತ್ತಾಡಿ ಇದರ ಅಧ್ಯಕ್ಷೆ ಶ್ರೀಮತಿ ಜಯ ಇವರ ನೇತತ್ವದಲ್ಲಿ ಕಾರ್ಯಕ್ರಮದ ಊಟದ ವ್ಯವಸ್ಥೆಗೆ ಆರ್ಥಿಕ ನೆರವನ್ನು ನೀಡಿ ಶುಭಹಾರೈಸಿದರು. ಅತಿಥಿ ಗಣ್ಯರು ಜತೆ ಸೇರಿ ಪೌಷ್ಟಿಕ ಆಹಾರದ ಕಿಟ್ಟ್‌ಗಳನ್ನು ವಿತರಿಸಿದರು.

ಎಸ್.ಎಂ.ವೈ.ಎಂ.ಬೆಳ್ತಂಗಡಿ, ಹಾಗೂ ನವಜೀವನ ಸಂಘದ ಸದಸ್ಯರಿಂದ ದೇಶಭಕ್ತಿ ಗೀತೆಗಳನ್ನು ಹಾಡಲಾಯಿತು. ಸಂಸ್ಥೆಯ ನಿರ್ದೇಶಕ ವಂ. ಫಾ. ಬಿನೋಯಿ ಎ.ಜೆ ದೇಶಕೋಸ್ಕರ ನಮ್ಮತನದ ಕೊಡುಗೆಗಳನ್ನು ನೀಡುವ ಮೂಲಕ ರಾಷ್ಟ್ರ ನಿರ್ಮಾಣದ ವಿನೂತನ ಹೆಜ್ಜೆಗಳನ್ನು ಇಡಲು ಶ್ರಮಿಸಬೇಕೆಂದು ಕರೆ ನೀಡುತ್ತಾ ಪ್ರಾಸ್ತಾವಿಕ ನುಡಿಯನ್ನಾಡಿದರು.

ಪುಷ್ಪರಾಜ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ನವ ಜೀವನ ಬೆಂಬಲ ಕಾರ್ಯಕ್ರಮದ ಸದಸ್ಯೆ ಶ್ರೀಮತಿ ಶಾರದಾ ಪ್ರಾರ್ಥನೆ ಹಾಡಿದರು. ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿ ಭರತ್ ಸ್ವಾಗತಿಸಿದರು. ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯಕರ್ತ ಜಾನ್ಸನ್ ವಂದಿಸಿದರು. ಸಂಯೋಜಕಿ ಶ್ರೇಯ ಕಾರ್ಯಕ್ರಮ ನಿರೂಪಿಸಿದರು.

Related posts

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

Suddi Udaya

ಸೆ.3ರಂದು ನಡೆಯುವ ಸಾರ್ವಜನಿಕ ಸಭೆಯಲ್ಲಿ ನ್ಯಾಯಾಲದ ಆದೇಶ ಉಲ್ಲಂಘಿಸದಂತೆ – ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ ಭಂಗ ಬರದಂತೆ ಸೂಕ್ತ ಕ್ರಮ ಕೈಗೊಳ್ಳಲು- ಸಮಾನ ಮನಸ್ಕರಿಂದ ತಹಸೀಲ್ದಾರರಿಗೆ ಮನವಿ

Suddi Udaya

ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya
error: Content is protected !!