ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ಕೇಳ್ತಾಜೆ ವಠಾರದಲ್ಲಿ ೭೮ನೇ ಸ್ವಾತಂತ್ರೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು.

ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಕೆ. ಹನೀಫ್ ನೆರವೇರಿಸಿದರು. ಮುಅಲ್ಲಿಮರಾದ ಝೈದ್ ಮುಈನಿ ಕೆಮ್ಮಾರ ಇವರು

ಸಂದೇಶ ಭಾಷಣ ಹಾಗೂ ದುಆ ನಿರ್ವಹಿಸಿದರು. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಶರೀಫ್ ಸಖಾಫಿ ಕನ್ಯಾಡಿ, ಸದಸ್ಯರಾದ ಅಬೂಬಕ್ಕರ್ ಬಿ.ಎ, ಇಸುಬು ಬಿ.ಎ, ಮುಬೀನ್ ಪಾರ್ನಡ್ಕ, ಮುಅಲ್ಲಿಮರಾದ ಇಸಾಕ್ ಮುಸ್ಲಿಯಾರ್ ಹಾಗೂ ಜಮಾಅತ್ ಭಾಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಿಹಿ ತಿಂಡಿ ವಿತರಿಸಲಾಯಿತು.

Leave a Comment

error: Content is protected !!