22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

ಉಜಿರೆ: ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ತುಳು ಸಂಸ್ಕೃತಿ ಪರಿಚಯಿಸುವ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆ.14ರಂದು ನಡೆಯಿತು.

ಮುಖ್ಯ ಅತಿಥಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವನರ್ತಕ ಮತ್ತು ಸಿವಿಲ್ ಇಂಜಿನಿಯರಿಂಗ್ ಉಪನ್ಯಾಸಕ ಡಾ. ರವೀಶ್ ಪಡುಮಲೆ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಆಟಿ ತಿಂಗಳ ದಿನಗಳ ಬಗ್ಗೆ ತಿಳಿಸಿದರು. ಹಿರಿಯರು ಬೇಸಾಯ ಮಾಡುತ್ತಿದ್ದ ಕಾಲವನ್ನು ನೆನಪಿಸಿದರು. ತುಳುನಾಡ ಕ್ಯಾಲೆಂಡರ್’ನ ಸೊಗಡು, ಆಟಿ ಕಳಂಜದ ವೈಶಿಷ್ಟ್ಯ, ದೈವ- ದೇವರುಗಳ ಕೆಲಸ ಕಾರ್ಯವನ್ನು ವಿವರಿಸಿದರು. ಆಟಿಯ ಕುರಿತಾದ ಹಾಡುಗಳನ್ನು ಹಾಡಿ ಸಾಂಪ್ರದಾಯಿಕ ತುಳು ಹಾಡುಗಳ ವೈಶಿಷ್ಟ್ಯವನ್ನು ವಿವರಿಸಿದರು.

ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಆಟಿ ತಿಂಗಳ ಬಗೆಗಿನ ಅರಿವಿನ ಅಗತ್ಯದ ಬಗ್ಗೆ ತಿಳಿಸಿದರು.

ಮನಸ್ವಿ ಅತಿಥಿ ಪರಿಚಯ ನೀಡಿದರು. ಜ್ಞಾನ್ ಅನ್ವೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ದೀಕ್ಷಾ ಸ್ವಾಗತಿಸಿ, ಅದೀಶ್ ವಂದಿಸಿ, ಮಧುಶ್ರೀ ನಿರೂಪಿಸಿದರು.

ಅತಿಥಿಗಳನ್ನು ಚೆಂಡೆ ವಾದನದೊಂದಿಗೆ ಸ್ವಾಗತಿಸಿ, ವೀಳ್ಯದೆಲೆ ಅಡಿಕೆ ನೀಡಿ, ವೇದಿಕೆಗೆ ಬರಮಾಡಿಕೊಂಡದ್ದು ವಿಶೇಷವಾಗಿತ್ತು. ವಿದ್ಯಾರ್ಥಿಗಳು ತುಳು ಹಾಡು, ತುಳು ಗಾದೆಮಾತುಗಳು, ಒಗಟುಗಳು ಮತ್ತು ನೃತ್ಯ ಪ್ರಸ್ತುತಪಡಿಸಿದರು.

ಆಟಿ ತಿಂಗಳ ವಿಶೇಷ ಖಾದ್ಯಗಳ ಪರಿಚಯವನ್ನು ನೀಡಿ ಸವಿಯಲಾಯಿತು. ಹಾಗೂ ಹಳೆಯ ಕಾಲದ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿತ್ತು.

Related posts

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

Suddi Udaya

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya
error: Content is protected !!