July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

ಉಜಿರೆ: ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ತುಳು ಸಂಸ್ಕೃತಿ ಪರಿಚಯಿಸುವ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆ.14ರಂದು ನಡೆಯಿತು.

ಮುಖ್ಯ ಅತಿಥಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವನರ್ತಕ ಮತ್ತು ಸಿವಿಲ್ ಇಂಜಿನಿಯರಿಂಗ್ ಉಪನ್ಯಾಸಕ ಡಾ. ರವೀಶ್ ಪಡುಮಲೆ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಆಟಿ ತಿಂಗಳ ದಿನಗಳ ಬಗ್ಗೆ ತಿಳಿಸಿದರು. ಹಿರಿಯರು ಬೇಸಾಯ ಮಾಡುತ್ತಿದ್ದ ಕಾಲವನ್ನು ನೆನಪಿಸಿದರು. ತುಳುನಾಡ ಕ್ಯಾಲೆಂಡರ್’ನ ಸೊಗಡು, ಆಟಿ ಕಳಂಜದ ವೈಶಿಷ್ಟ್ಯ, ದೈವ- ದೇವರುಗಳ ಕೆಲಸ ಕಾರ್ಯವನ್ನು ವಿವರಿಸಿದರು. ಆಟಿಯ ಕುರಿತಾದ ಹಾಡುಗಳನ್ನು ಹಾಡಿ ಸಾಂಪ್ರದಾಯಿಕ ತುಳು ಹಾಡುಗಳ ವೈಶಿಷ್ಟ್ಯವನ್ನು ವಿವರಿಸಿದರು.

ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಆಟಿ ತಿಂಗಳ ಬಗೆಗಿನ ಅರಿವಿನ ಅಗತ್ಯದ ಬಗ್ಗೆ ತಿಳಿಸಿದರು.

ಮನಸ್ವಿ ಅತಿಥಿ ಪರಿಚಯ ನೀಡಿದರು. ಜ್ಞಾನ್ ಅನ್ವೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ದೀಕ್ಷಾ ಸ್ವಾಗತಿಸಿ, ಅದೀಶ್ ವಂದಿಸಿ, ಮಧುಶ್ರೀ ನಿರೂಪಿಸಿದರು.

ಅತಿಥಿಗಳನ್ನು ಚೆಂಡೆ ವಾದನದೊಂದಿಗೆ ಸ್ವಾಗತಿಸಿ, ವೀಳ್ಯದೆಲೆ ಅಡಿಕೆ ನೀಡಿ, ವೇದಿಕೆಗೆ ಬರಮಾಡಿಕೊಂಡದ್ದು ವಿಶೇಷವಾಗಿತ್ತು. ವಿದ್ಯಾರ್ಥಿಗಳು ತುಳು ಹಾಡು, ತುಳು ಗಾದೆಮಾತುಗಳು, ಒಗಟುಗಳು ಮತ್ತು ನೃತ್ಯ ಪ್ರಸ್ತುತಪಡಿಸಿದರು.

ಆಟಿ ತಿಂಗಳ ವಿಶೇಷ ಖಾದ್ಯಗಳ ಪರಿಚಯವನ್ನು ನೀಡಿ ಸವಿಯಲಾಯಿತು. ಹಾಗೂ ಹಳೆಯ ಕಾಲದ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿತ್ತು.

Related posts

ವೇಣೂರು: ಭಾರತೀಯ ಜೈನ್ ಮಿಲನ್ ವತಿಯಿಂದ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್‌ರವರಿಗೆ ಅಭಿನಂದನೆ

Suddi Udaya

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ರಾಜೇಶ್ ಪೈ ಅವರಿಗೆ ಉಜಿರೆ ವರ್ತಕರ ಸಂಘದಿಂದ ಗೌರವ ಸನ್ಮಾನ-ಉಜಿರೆ ನನ್ನನ್ನು ಬೆಳೆಸಿದ, ಪೋಷಿಸಿದ ಊರು: ಉದ್ಯಮಿ ರಾಜೇಶ್ ಪೈ

Suddi Udaya

ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆ: ಸಾರ್ವಜನಿಕರು, ಉದ್ಯಮಿಗಳು ಹಾಗೂ ರೈತರಿಗೆ ಸಂಕಷ್ಟ: ಪ್ರತಾಪಸಿಂಹ ನಾಯಕ್‌

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ ವಿಳಂಬ: ದೇವಸ್ಥಾನ ದೈನಂದಿನ ಪೂಜಾ ಕಾರ್ಯ ಹಾಗೂ ವಾರ್ಷಿಕ ಆಚರಣೆಗಳಿಗೆ ತೀವ್ರ ಅಡಚಣೆ: ಮಳೆಯಿಂದ ದೇವಾಲಯದ ತಡೆಗೋಡೆ ಕುಸಿದು ದೇವಾಲಯದ ಒಳಗೆ ಕೆಸರುಮಯವಾದರೂ ಕೇಳುವವರಿಲ್ಲ: ಭಕ್ತರ ತೀವ್ರ ಅಕ್ರೋಶ, ದೇವಸ್ಥಾನದಲ್ಲಿ ಧರಣಿ ನಡೆಸುವ ಎಚ್ಚರಿಕೆ

Suddi Udaya
error: Content is protected !!