25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ 2024-25 ನೇ ಶೈಕ್ಷಣಿಕ ವರ್ಷದ ಪ್ರಥಮ, ಶಿಕ್ಷಕ-ರಕ್ಷಕ ಸಭೆಯು ಕಾಲೇಜು ಸಭಾಂಗಣದಲ್ಲಿ ಜರುಗಿತು.

ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ ರವರು ಪ್ರಸ್ತಾವನೆಯನ್ನು ಮಂಡಿಸಿ ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳನ್ನು ಮತ್ತು ಸದಸ್ಯರು ಆಯ್ಕೆ ಮಾಡಿದರು.ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ಪೋಷಕರಿಗಿದ್ದ ಎಲ್ಲಾ ಸಂದೇಹಗಳಿಗೆ ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ, ಸಂಸ್ಥೆಯ ಕಾರ್ಯನಿರ್ವಾಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ರವರು ಸಮಾಧಾನಕರವಾದ ರೀತಿಯಲ್ಲಿ ಸಮಾಲೋಚನೆಯನ್ನು ನಡೆಸಿದರು. ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸುರೇಶ್ ಪೂಜಾರಿ ಸಂಸ್ಥೆಯ ಪರಿಶ್ರಮವನ್ನು ಶ್ಲಾಘಿಸಿ ಶುಭವನ್ನು ಹಾರೈಸಿದರು. ಉಪಾಧ್ಯಕ್ಷ ರಾಗಿ ಮಹಾಂತೇಶ್ ವಾಲಿಕರ್ ಮತ್ತು ಸತೀಶ್ ಪೂಜಾರಿ,
ಕೋಶಾಧಿಕಾರಿಯಾಗಿ ಅಶ್ವಥ್ ನಾರಾಯಣ, ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಉಪನ್ಯಾಸಕರ ಮತ್ತು ಹೆತ್ತವರ ಜವಾಬ್ದಾರಿಯನ್ನು ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ ಎಚ್ ರವರು ಮನೋಜ್ಞವಾಗಿ ಸಭಾಸದರಿಗೆ ತಲುಪಿಸಿದರು. ಈ ಕಾರ್ಯಕ್ರಮವನ್ನು ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಸುವರ್ಣ ಲತಾ ನಿರೂಪಿಸಿ, ಕುಮಾರಿ ಸುಶ್ಮಿತಾ ರಸಾಯನಶಾಸ್ತ್ರ ಉಪನ್ಯಾಸಕಿ ಸ್ವಾಗತಿಸಿದರು. ವಿನಯ್ ಎಂ ಎಸ್ ಗಣಕಶಾಸ್ತ್ರ ಉಪನ್ಯಾಸಕರು ವಂದಿಸಿದರು.

Related posts

ಪುತ್ತಿಲ : ಕಲ್ಲಾಜೆ ಎಂಬಲ್ಲಿ ಕುಸಿಯುವ ಭೀತಿಯಲ್ಲಿರುವ ಸೇತುವೆ: ದುರಸ್ತಿಗೆ ಆಗ್ರಹ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಸೆ.21: ಕರಾಯ ವಿದ್ಯುತ್ ನಿಲುಗಡೆ

Suddi Udaya

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya
error: Content is protected !!