25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನಾವೂರು: 78 ನೇ ವರ್ಷದ ಸ್ವಾತಂತ್ರ್ಯೋತ್ಸವ


ನಾವೂರು: ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ನಾವೂರಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು,
ಗ್ರಾಮ ಪಂಚಾಯತ್,ಪ್ರೌಢ ಶಾಲಾ ಮೈದಾನ,
ಪ್ರಾಥಮಿಕ ಶಾಲಾ ವಠಾರ,ಹಾಗೂ ಅಂಗನವಾಡಿ ಕೇಂದ್ರ ಗಳಲ್ಲಿ ಧ್ವಜಾರೋಹಣ ಮಾಡಿ ಸಿಹಿ ತಿಂಡಿ ಹಂಚಿ ಸಂಭ್ರಮಿಸಲಾಯಿತು,
ತದನಂತರ ಪ್ರಾಥಮಿಕ ಶಾಲೆಯಲ್ಲಿ ಸಭಾ ಕಾರ್ಯಕ್ರಮ ನೆರವೇರಿತು,ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪ್ರಭು ರವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭಾ ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಗಳಾಗಿ ವಿ, ಪಿ, ಆಂಟನಿ ಸಂಪಿಂಜೆ, ಸೆಬಾಸ್ಟಿನ್ ವಿ.ಪಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ,ನಾವೂರು, ರಜತ್ ಮೂರ್ತಾಜೆ ಕಾರ್ಯದರ್ಶಿ ಹಿರಿಯ ವಿದ್ಯಾರ್ಥಿ ಸಂಘ ನಾವೂರು, ಶೃತಿ ಜೈನ್ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ, ಸುನಂದ ಗ್ರಾಪಂ ಅಧ್ಯಕ್ಷರು ನಾವೂರು,ಗಣೇಶ್ ನೆಲ್ಲಿಪಲ್ಕೆ ಗ್ರಾಪಂ ಸದಸ್ಯರು ನಾವೂರು, ಪಂಚಾಕ್ಷರಿ ದೈಹಿಕ ಶಿಕ್ಷಕರು ಪ್ರಾಥಮಿಕ ಶಾಲೆ ನಾವೂರು ಹಾಜರಿದ್ದರು,
ಈ ಸಂದರ್ಭ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಾದ
ತರುಣ್ ಆರ್, ಕೆ, ಪ್ರಥಮ, ಮಹಮ್ಮದ್ ಮುಭಾಷಿರ್ ತಾಕ್ಮಲ್
ದ್ವಿತೀಯ, ಇವರನ್ನು ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ನಗದು ಹಣ ನೀಡಿ ಸನ್ಮಾನಿಸಿ ಗೌರವಿಸಲಾಯಿತು,
ದೈಹಿಕ ಶಿಕ್ಷಕ ಪಂಚಾಕ್ಷರಿ ಸ್ವಾಗತಿಸಿದ ಈ ಕಾರ್ಯಕ್ರಮವನ್ನು ಶೋಭಾ ಪಿ, ಡಿ ವಂದಿಸಿದರು, ಶುಭ ಕಾರ್ಯಕ್ರಮ ನಿರೂಪಿಸಿದರು, ತದನಂತರ ಶಾಲಾ ಮಕ್ಕಳಿಂದ
ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು

Related posts

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ನವದುರ್ಗ ಲೇಖನ ಯಜ್ಞ ಕುರಿತು ಮಾಹಿತಿ

Suddi Udaya

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

Suddi Udaya

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ನಾಲ್ಕೂರು: ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!