September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಮುಹಿಯುದ್ದೀನ್ ಜುಮಾ ಮಸೀದಿ ಮುರ – ನಾವೂರು ಇಲ್ಲಿನ ನೂರುಲ್ ಹುದಾ ಮದರಸ ವಠಾರದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಬಹಳ ವಿಜೃಂಭಣೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತ್ ಕಮಿಟಿ ಅಧ್ಯಕ್ಷರಾದ ಎನ್. ಕೆ ಹಸೈನಾರ್ ವಹಿಸಿದ್ದರು. ಎಂಜೆಎಂ ಮುರ ಇಲ್ಲಿನ ಖತೀಬ್ ಬಶೀರ್ ಸಅದಿ ದುಆ ಹಾಗೂ ಸಂದೇಶ ಭಾಷಣ ಮಾಡುತ್ತಾ ಹಲವು ಮಂದಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು,ಅದನ್ನು ಉಳಿಸಿಕೊಳ್ಳಲು ಯಾವ ತ್ಯಾಗಕ್ಕೂ ನಾವು ಸನ್ನದ್ಧರಾಗಬೇಕಿಗಿದೆ ಎಂದರು.

ನೂರುಲ್ ಹುದಾ ಮದರಸದ ಸದರ್ ಮುಅಲ್ಲಿಮ್ ಅಬ್ದುಲ್ ಹಮೀದ್ ಝುಹರಿ, ಮುಹಿಯುದ್ದೀನ್ ಜುಮಾ ಮಸೀದಿ ಪ್ರ.ಕಾರ್ಯದರ್ಶಿ ಅಬ್ದುಲ್ ಖಾದರ್ ನಾವೂರು ಸ್ವಾತಂತ್ರ್ಯ ಹೋರಾಟಗಾರರ ಚರಿತ್ರೆಯನ್ನು ಸಭೆಯ ಮುಂದಿಟ್ಟರು.

ವೇದಿಕೆಯಲ್ಲಿ ಜಮಾಅತ್ ಉಪಾಧ್ಯಕ್ಷ ಮುಹಮ್ಮದ್ ಮುಸ್ಲಿಯಾರ್, ಕೋಶಾಧಿಕಾರಿ ಇಬ್ರಾಹಿಂ ಎನ್. ಎ, ಕಾರ್ಯದರ್ಶಿಗಳಾದ ಸುಲೈಮಾನ್ ಪಿ.ವೈ, ಸ್ವಾದಿಕ್ ನಾವೂರು, ಜಮಾಅತ್ ಕಮಿಟಿ ಸದಸ್ಯರುಗಳಾದ ಹಸನಬ್ಬ ನಿoರ್ದಿ, ಮುಹಮ್ಮದ್ ಪಿ.ಎಂ ಮುರ, ಅಬ್ದುಲ್ ರಹಿಮಾನ್ ಮುಸ್ಲಿಯಾರ್, ಇಸ್ಮಾಯಿಲ್ ಕಿರ್ನಡ್ಕ, ಪಿ.ಯು ಅಲಿಕುಂಞ ಸಖಾಫಿ, ಮದರಸ ಅಧ್ಯಾಪಕರಾದ ಹನೀಫ್ ಸಖಾಫಿ, ಸಿದ್ದೀಕ್ ಸಖಾಫಿ, ಷರೀಫ್ ಮುಸ್ಲಿಯಾರ್, ಖಾಲಿದ್ ಮದನಿ, ಎಂಜೆಎಂ ನ ಎಲ್ಲಾ ಅಂಗಸಂಸ್ಥೆಗಳ ನಾಯಕರು, ಮದರಸ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮದರಸ ವಿದ್ಯಾರ್ಥಿಗಳಿಗೆ ನಡೆಸಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧಾ ವಿಜೇತರಿಗೆ ಬೆಳ್ತಂಗಡಿ ಇಮೇಜ್ ಮೊಬೈಲ್ ಮಾಲಕರಾದ ಅಝರ್ ಎನ್. ಕೆ ಪ್ರಶಸ್ತಿ ಪ್ರಧಾನ ಮಾಡಿದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿತಿಂಡಿ ವಿತರಿಸಿ ಸಂಭ್ರಮಿಸಲಾಯಿತು.

Related posts

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ 2025–26: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya
error: Content is protected !!