23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಯಲ್ಲಿ 78ರ ಸ್ವಾತಂತ್ರ್ಯ ಸಂಭ್ರಮ ಹಾಗೂ ಪವರ್ ಮೆನ್‌ಗೆ ಗೌರವಾರ್ಪಣೆ

ಉಜಿರೆ: ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ವಠಾರದಲ್ಲಿ 78ರ ಸ್ವಾತಂತ್ರ್ಯವು ಬಹಳ ವಿಜ್ರಂಭನೆಯಿಂದ ನಡೆಯಿತು.


ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷರಾದ ಬಿ.ಎಮ್ ಇಲ್ಯಾಸ್ ರವರು ನಿರ್ವಹಿಸಿದರು. ಖತೀಬುಸ್ತಾದರಾದ ಸಲೀಂ ಸಖಾಫಿ ರವರು ಸಂದೇಶ ಭಾಷಣ ಹಾಗೂ ದುಆ ನಿರ್ವಹಿಸಿದರು. ಸಮಾರಂಭದಲ್ಲಿ ವಿಧ್ಯಾರ್ಥಿಗಳಿಂದ ಸ್ವಾತಂತ್ರ್ಯ ಹೋರಾಟಗಾರ ರ ಬಗ್ಗೆ ಭಾಷಣ ನಡೆಯಿತು.

ಪವರ್‌ಮೆನಾಗಿ ಕಾರ್ಯನಿರ್ವಹಿಸುತ್ತಿರುವ ರಮೇಶ್ ಗೌಡ ಕಿರಿಯಾಡಿ ರವರಿಗೆ ಆಡಳಿತ ಸಮಿತಿ ಹಾಗೂ ಜೆ.ಎಮ್.ಜೆ, ಎಸ್.ವೈ.ಎಸ್ ,ಎಸ್.ಎಸ್.ಎಫ್, ಖಿದ್ಮತ್ ಗ್ರೂಪ್ ವತಿಯಿಂದ ಶಾಲು ಹೊದಿಸಿ ಗೌರವಾರ್ಪಿಸಲಾಯಿತು.


ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಮಾಚಾರ್ ಪವರ್ಮೆನನ್ನು ಪರಿಚಯಿಸಿ ಅವರ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಸದರ್ ಉಸ್ತಾದರಾದ ಸಿದ್ದೀಕ್ ಝೈನಿ, ಜಮಾಅತ್ ಗೌರವಾಧ್ಯಕ್ಷ ಹಂಝ ಬಿ.ಎ, ಕೋಶಾಧಿಕಾರಿ ಹಸೈನಾರ್ ಟೈಲ್ಸ್, ಅಕ್ಬರ್ ಅಲಿ ಬಂಡಸಾಲೆ, ಹಸೈನಾರ್ ಹೆಚ್.ಕೆ.ಜಿ.ಎನ್, ಎಸ್.ವೈ.ಎಸ್ ಅಧ್ಯಕ್ಷರು ಸಲೀಂ ಅಂಗಡಿ,ಪ್ರಧಾನ ಕಾರ್ಯದರ್ಶಿ ಕಬೀರ್ ಮಿಸ್ಬಾಹಿ ,ಖಿದ್ಮತ್ ಗ್ರೂಪ್ ಅಧ್ಯಕ್ಷ ಆರೀಫ್ ಮಾಚಾರ್ , ರಝಾಕ್ ಚೆಕ್ಕದಡಿ, ಅಬ್ದುಲ್ ಹಮೀದ್ ಅಂಗಡಿ, ಆದಮ್ ಆಟೋ, ಹಕೀಮ್ ಕುದುರು, SSF ಅಧ್ಯಕ್ಷ ಸಿದ್ದೀಕ್ ಚೆಕ್ಕದಡಿ ,ಪ್ರಧಾನ ಕಾರ್ಯದರ್ಶಿ ನೌಶಾದ್ ಉಪಸ್ಥಿತರಿದ್ದರು.

Related posts

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆ – ಮಾಹಿತಿ ಶಿಬಿರ

Suddi Udaya

ಲಾಯಿಲ-ಧರ್ಮಸ್ಥಳ ದಾರಿ ಮಧ್ಯೆ ಮಹಿಳೆಯೊಬ್ಬರ ಕರಿಮಣಿ ಸರ ಕಳೆದು ಹೋಗಿದೆ

Suddi Udaya

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya
error: Content is protected !!