23.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿ

ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಯಲ್ಲಿ 78ರ ಸ್ವಾತಂತ್ರ್ಯ ಸಂಭ್ರಮ ಹಾಗೂ ಪವರ್ ಮೆನ್‌ಗೆ ಗೌರವಾರ್ಪಣೆ

ಉಜಿರೆ: ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ವಠಾರದಲ್ಲಿ 78ರ ಸ್ವಾತಂತ್ರ್ಯವು ಬಹಳ ವಿಜ್ರಂಭನೆಯಿಂದ ನಡೆಯಿತು.


ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷರಾದ ಬಿ.ಎಮ್ ಇಲ್ಯಾಸ್ ರವರು ನಿರ್ವಹಿಸಿದರು. ಖತೀಬುಸ್ತಾದರಾದ ಸಲೀಂ ಸಖಾಫಿ ರವರು ಸಂದೇಶ ಭಾಷಣ ಹಾಗೂ ದುಆ ನಿರ್ವಹಿಸಿದರು. ಸಮಾರಂಭದಲ್ಲಿ ವಿಧ್ಯಾರ್ಥಿಗಳಿಂದ ಸ್ವಾತಂತ್ರ್ಯ ಹೋರಾಟಗಾರ ರ ಬಗ್ಗೆ ಭಾಷಣ ನಡೆಯಿತು.

ಪವರ್‌ಮೆನಾಗಿ ಕಾರ್ಯನಿರ್ವಹಿಸುತ್ತಿರುವ ರಮೇಶ್ ಗೌಡ ಕಿರಿಯಾಡಿ ರವರಿಗೆ ಆಡಳಿತ ಸಮಿತಿ ಹಾಗೂ ಜೆ.ಎಮ್.ಜೆ, ಎಸ್.ವೈ.ಎಸ್ ,ಎಸ್.ಎಸ್.ಎಫ್, ಖಿದ್ಮತ್ ಗ್ರೂಪ್ ವತಿಯಿಂದ ಶಾಲು ಹೊದಿಸಿ ಗೌರವಾರ್ಪಿಸಲಾಯಿತು.


ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಮಾಚಾರ್ ಪವರ್ಮೆನನ್ನು ಪರಿಚಯಿಸಿ ಅವರ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಸದರ್ ಉಸ್ತಾದರಾದ ಸಿದ್ದೀಕ್ ಝೈನಿ, ಜಮಾಅತ್ ಗೌರವಾಧ್ಯಕ್ಷ ಹಂಝ ಬಿ.ಎ, ಕೋಶಾಧಿಕಾರಿ ಹಸೈನಾರ್ ಟೈಲ್ಸ್, ಅಕ್ಬರ್ ಅಲಿ ಬಂಡಸಾಲೆ, ಹಸೈನಾರ್ ಹೆಚ್.ಕೆ.ಜಿ.ಎನ್, ಎಸ್.ವೈ.ಎಸ್ ಅಧ್ಯಕ್ಷರು ಸಲೀಂ ಅಂಗಡಿ,ಪ್ರಧಾನ ಕಾರ್ಯದರ್ಶಿ ಕಬೀರ್ ಮಿಸ್ಬಾಹಿ ,ಖಿದ್ಮತ್ ಗ್ರೂಪ್ ಅಧ್ಯಕ್ಷ ಆರೀಫ್ ಮಾಚಾರ್ , ರಝಾಕ್ ಚೆಕ್ಕದಡಿ, ಅಬ್ದುಲ್ ಹಮೀದ್ ಅಂಗಡಿ, ಆದಮ್ ಆಟೋ, ಹಕೀಮ್ ಕುದುರು, SSF ಅಧ್ಯಕ್ಷ ಸಿದ್ದೀಕ್ ಚೆಕ್ಕದಡಿ ,ಪ್ರಧಾನ ಕಾರ್ಯದರ್ಶಿ ನೌಶಾದ್ ಉಪಸ್ಥಿತರಿದ್ದರು.

Related posts

ಎಕ್ಸೆಲ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಕಾರ್ಯಾಗಾರ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಬೆಳ್ತಂಗಡಿಯಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಕಾಲ್ನಡಿಗೆ ಜಾಥಾ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!