ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ಧ್ವಜಾರೋಹಣವನ್ನು ನೆರವೇರಿಸಿ, ಹಿರಿಯರ ಹೋರಾಟ, ತ್ಯಾಗ, ಬಲಿದಾನಗಳ ಮೂಲಕ ಪಡೆದುಕೊಂಡ ಸ್ವಾತಂತ್ರ್ಯ ಹಾಗೂ ಅದರ ರಕ್ಷಣೆಯ ಜವಾಬ್ದಾರಿಯನ್ನು ತಿಳಿಸಿದರು.


ಈ ಸಂದರ್ಭದಲ್ಲಿ ಸಂಸ್ಥೆಗಳ ಪ್ರಾಂಶುಪಾಲರು, ಮುಖ್ಯಶಿಕ್ಷಕರು, ಎಲ್ಲಾ ಬೋಧಕ, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಧ್ವಜಾರೋಹಣದ ಬಳಿಕ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ, ಭಾಷಣ, ಇತ್ಯಾದಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Leave a Comment

error: Content is protected !!