July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

ಗುರುವಾಯನಕೆರೆ: ನಗರದ ವಿದ್ವತ್ ಪಿಯು ಕಾಲೇಜಿನಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿ ಮಕ್ಕಳನ್ನುದ್ದೇಶಿಸಿ ಮಾತನಾಡಿದರು.

ಆಡಳಿತಾಧಿಕಾರಿಗಳಾದ ಚಂದ್ರಶೇಖರ ಗೌಡರವರು ಸ್ವಾತಂತ್ರ್ಯ ಸಂಗ್ರಾಮದ ತ್ಯಾಗ ಬಲಿದಾನದ ಇತಿಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

ನಂತರ ವಿದ್ವತ್ ಪಿಯು ಕಾಲೇಜಿನ ತನ್ನ ಪ್ರಪ್ರಥಮ ಸ್ವಾತಂತ್ರ್ಯ ದಿನಾಚರಣೆಯನ್ನು ಸ್ಮರಣೀಯ ಮಾಡಲು “ವಿಜ್ಞಾನ-ವಿಸ್ಮಯ ಮತ್ತು ಕುತೂಹಲ”ಎಂಬ ಶೀರ್ಷಿಕೆಯಡಿಯಲ್ಲಿ ಬೆಳಗ್ಗೆ 11.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಜಗತ್ತಿನ ವಿಸ್ಮಯಕ್ಕೆ ಒಳಗಣ್ಣು ತೆರೆದಿಟ್ಟು, ಅನುಭವಿಸಿ, ಅರ್ಥೈಸಿ, ವಿವೇಚನೆಗೊಳಪಡಿಸುವ ವಿಶೇಷ ಸಂವಾದ ಇದಾಗಿತ್ತು, ಯುವ ಮನಸ್ಸುಗಳ ಮೇಲೆ ವೈಜ್ಞಾನಿಕ ವಿಶ್ಲೇಷಣೆಯ ಪ್ರಭಾವ ಬೀರಿ ಊಹೆಗೆ ನಿಲುಕದ ಪ್ರಕೃತಿಯ ವಿಸ್ಮಯವನ್ನು ಅರ್ಥೈಸಿಕೊಳ್ಳುವ ಒಂದು ವಿಶೇಷ ಪ್ರಯತ್ನ ಇದಾಗಿತ್ತು. ಸಾಂಪ್ರದಾಯಿಕ ಪಾಠ-ಪ್ರವಚನ ಮತ್ತು ಪರೀಕ್ಷಾ ಪದ್ಧತಿಗಿಂತ ವಿಭಿನ್ನವಾಗಿ ಆಲೋಚಿಸುವ ಪ್ರಯತ್ನ ಇದಾಗಿತ್ತು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ. ಮಂಡಗಳಲೆ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಮಚಂದ್ರ ಎಮ್.ಎಸ್. ಹಾಗೂ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರತಾಪ್ ದೊಡ್ಡಮನೆ ಅವರು ತಮ್ಮ ಸುದೀರ್ಘ ಶೈಕ್ಷಣಿಕ ಅನುಭವದ ಆಧಾರದ ಮೇಲೆ ವಿಜ್ಞಾನದ ವಿಸ್ಮಯವನ್ನು ವ್ಯಾಖ್ಯಾನಿಸಿದರು.

ಈ ಅಪರೂಪದ ಕಾರ್ಯಾಗಾರಕ್ಕೆ 7 ಪ್ರೌಢಶಾಲಾ ಹಾಗೂ ಪಿಯು ಕಾಲೇಜಿನ 52 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂವಾದ ಕಾರ್ಯಗಾರದಲ್ಲಿ ಉತ್ತಮ ಪ್ರಶ್ನೆ ಕೇಳಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ನೀಡಲಾಯಿತು. ಈ ಅರ್ಥಪೂರ್ಣ ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ನೀಡಲಾಯಿತು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಎಕ್ಸೆಲ್‌ ಕಾಲೇಜು ವಿಜ್ಞಾನ ವಿಭಾಗಕ್ಕೆ ಶೇ.100 ಫಲಿತಾಂಶ: ಅಕ್ಷಯ್ ಗೆ 595 ಅಂಕ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾವೂರು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

Suddi Udaya
error: Content is protected !!