25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ವಿ.ಹಿಂ.ಪ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

ವೇಣೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಪ್ರಖಂಡ ಹಾಗೂ ಹಿಂದೂ ಜಾಗರಣ ವೇದಿಕೆ ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆಯು ಆ.14ರಂದು ವೇಣೂರು ಶ್ರೀರಾಮ ಭಜನಾ ಮಂದಿರದಿಂದ ಹೊರಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಪಂಜನ್ನು ಹಿಡಿದು ಮೆರವಣಿಗೆಯ ಮೂಲಕ ನಡೆಯಿತು.

ಸಂಘದ ಮಂಗಳೂರು ವಿಭಾಗದ ಸಾಮರಸ್ಯ ಸಹ ಸಂಯೋಜಕ ಶಿವಪ್ರಸಾದ ಮಲೆಬೆಟ್ಟು ಇವರು ದಿಕ್ಸೂಚಿ ಭಾಷಣವನ್ನು ಮಾಡಿ ಸ್ವಾತಂತ್ರ್ಯದ ಪೂರ್ವದಲ್ಲಿ ಅಖಂಡವಾಗಿದ್ದ ಭಾರತ ತ್ರಿಖಂಡವಾದ ಕರಾಳ ದಿನದ ಸನ್ನಿವೇಶಗಳನ್ನು ನೆನಪಿಸಿ ಹಿಂದೂ ಸಮಾಜ ಸಂಘಟಿತವಾಗಿ ಜಾಗೃತವಾದಾಗ ಮಾತ್ರ ರಾಷ್ಟ್ರ ಉಳಿದೀತು ಎಂದರು.

ವೇದಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಹಿಂದೂ ಜಾಗರಣ ವೇದಿಕೆ ತಾಲೂಕು ಸಂಚಾಲಕ ನಿರಂಜನ ನಿಟ್ಟಡೆ, ಪ್ರಮುಖರಾದ ವಿಜಯ ಗೌಡ, ಸುದರ್ಶನ್ ಕಾರಂತ್, ಸೋಮನಾಥ ಕೆ.ವಿ., ರಮೇಶ್ ಹೆಗ್ಡೆ, ದಿನೇಶ್ ಕರಿಮಣೇಲು, ಕೆ.ವೈ. ರವಿ ಭಟ್ ಇನ್ನಿತರರು ಉಪಸ್ಥಿತರಿದ್ದರು.

ವಿ.ಹಿಂ.ಪ. ನ ಪ್ರಮುಖರಾದ ಸುದೀಪ್ ಪಟವರ್ಧನ್ ಸ್ವಾಗತಿಸಿ, ರೋಹಿತ್ ಆಚಾರ್ಯ ನಡ್ತಿಕಲ್ಲು ವೈಯಕ್ತಿಕ ಗೀತೆ ಹಾಡಿದರು. ಸಂತೋಷ ಮಂಜಿಲ ಸಂಕಲ್ಪ ಬೋಧಿಸಿ, ವಿ.ಹಿಂ.ಪ. ನ ಪ್ರಮುಖ ಪ್ರಜ್ವಲ್ ವೇಣೂರು ಧನ್ಯವಾದ ವಿತ್ತರು. ಉಮೇಶ ನಡ್ತಿಕಲ್ಲು ಕಾರ್ಯಕ್ರಮವನ್ನು ನಿರೂಪಿಸಿದರು. ಸರ್ವಾರ್ಥ ಎಸ್ ಜೈನ್ ಹಾಡಿದ ವಂದೇಮಾತರಂ ಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

Related posts

ಜೂ.27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ: ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರು ಆರೋಪಿಗಳ ಬಂಧನ

Suddi Udaya

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಸುಪ್ರೀಂ ಸೋಫಾ ಮಾರ್ಟ್, ಇಲೆಕ್ಟ್ರಾನಿಕ್ಸ್- ಫರ್ನಿಚರ್ಸ್ 3 ಲಕ್ಕಿ ಸ್ಕಿಂ ನ ಗ್ರ್ಯಾಂಡ್ ಫಿನಾಲೆ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

Suddi Udaya
error: Content is protected !!