April 7, 2025
ಶಾಲಾ ಕಾಲೇಜು

ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿ 78 ನೇ ವರ್ಷದ ಸ್ವಾತಂತ್ರೋತ್ಸವ

ಬೆಳ್ತಂಗಡಿ :ಆ 15.ನಾವು ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ಎಂದರೆ ಇದರ ಹಿಂದೆ ಸಾಕಷ್ಟು ಜನರ ಬಲಿದಾನವಿದೆ ಎಂಬುದನ್ನು ಮರೆಯುವಂತಿಲ್ಲ. ನಮ್ಮ ರಾಷ್ಟ್ರವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ. ಭಾರತದಲ್ಲಿ ಸಂಸ್ಕೃತಿ, ಭಾಷೆ ಹಾಗೂ ಧರ್ಮದಲ್ಲಿ ಸಾಕಷ್ಟು ವೈವಿಧ್ಯತೆಯನ್ನು ಕಾಣಬಹುದಾಗಿದೆ. ಆದರೂ ಕೂಡ ನಾವೆಲ್ಲ ಒಂದಾಗಿ ಏಕತೆಯಿಂದ ಭವ್ಯ ಭಾರತದಲ್ಲಿ ಬಾಳುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ.
ಭಾರತ ಮಾತೆಯ ಮಕ್ಕಳಾದ ನಾವೆಲ್ಲ ಎಂದಿಗೂ ಪರಸ್ಪರರ ಧರ್ಮ, ಭಾಷೆ ಹಾಗೂ ಸಂಸ್ಕೃತಿಯನ್ನು ಗೌರವಿಸುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಸಾಮರಸ್ಯದಿಂದ ಬಾಳಿದರೆ ಮಾತ್ರ ನಾವು ಶತ್ರುಗಳನ್ನು ಸೆದೆಬಡಿಯಲು ಸಾಧ್ಯವಿದೆ. ಅಲ್ಲದೇ ನಮ್ಮ ಪೂರ್ವಜರು ನಮಗೆ ಸ್ವಾತಂತ್ರ್ಯವನ್ನು ತಂದುಕೊಟ್ಟಿರುವುದು ಇಂದು ನಾವು ಧರ್ಮಕ್ಕಾಗಿ , ಭಾಷೆಗಾಗಿ ಹೋರಾಡಲಿ ಎಂದಲ್ಲ. ಬದಲಾಗಿ ಭಾರತದಲ್ಲಿ ಒಗ್ಗಟ್ಟಿನಿಂದ ಬಾಳಲಿ ಎಂದಾಗಿದೆ. ಹೀಗಾಗಿ ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸಿನ ಭಾರತ ನಿರ್ಮಿಸಲು ಒಂದಾಗಬೇಕಿದೆ. ಸ್ವಾತಂತ್ರ್ಯ ದಿನವಾದ ಇಂದು ನಾವು ದೇಶದಲ್ಲಿ ಏಕತೆ, ಶಾಂತಿ ಹಾಗೂ ಅಭಿವೃದ್ಧಿಯನ್ನು ಸಾಧಿಸಲು ಒಂದಾಗಿ ಪ್ರತಿಜ್ಞೆ ತೊಡೋಣ ಎಂದು ಜಿಲ್ಲಾ ಕೆ ಡಿ ಪಿ ಸದಸ್ಯ ನೋಟರಿ ನ್ಯಾಯವಾದಿ ಸಂತೋಷ್ ಕುಮಾರ್ ಲೈಲಾ ನುಡಿದರು. ಅವರು ಇಂದು ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿ ಇಲ್ಲಿ 78 ನೇ ವರ್ಷದ ಸ್ವಾತಂತ್ರೋಸ್ಥವದ ಧ್ವಜಾರೋಹಣ ಮಾಡಿ ಮಕ್ಕಳಿಗೆ ಸಂದೇಶ ಸಾರಿದರು.
ಈ ಸಂದರ್ಬದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೀನಾ, ಪಿಯೂಸಿ ಕಾಲೇಜಿನ ಪ್ರಾಚಾರ್ಯರಾದ ಸಿಸ್ಟೆರ್ , ಪಿಟಿಎ ಉಪಾದ್ಯಕ್ಷರಾದ ಜಗನ್ನಾಥ ಪುತ್ರಬೈಲು, ಹಳೆ ವಿದ್ಯಾರ್ಥಿ ಸಂಘದ ಉಪಾದ್ಯಕ್ಷರಾದ ನಾರಾಯಣ ಶೆಟ್ಟಿ ಉಪಸ್ಥರಿದ್ದರು.

Related posts

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

Suddi Udaya

ಉಜಿರೆಯ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದಪ್ರದಾನ ಕಾರ್ಯಕ್ರಮ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ