23.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿ 78 ನೇ ವರ್ಷದ ಸ್ವಾತಂತ್ರೋತ್ಸವ

ಬೆಳ್ತಂಗಡಿ :ಆ 15.ನಾವು ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ಎಂದರೆ ಇದರ ಹಿಂದೆ ಸಾಕಷ್ಟು ಜನರ ಬಲಿದಾನವಿದೆ ಎಂಬುದನ್ನು ಮರೆಯುವಂತಿಲ್ಲ. ನಮ್ಮ ರಾಷ್ಟ್ರವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ. ಭಾರತದಲ್ಲಿ ಸಂಸ್ಕೃತಿ, ಭಾಷೆ ಹಾಗೂ ಧರ್ಮದಲ್ಲಿ ಸಾಕಷ್ಟು ವೈವಿಧ್ಯತೆಯನ್ನು ಕಾಣಬಹುದಾಗಿದೆ. ಆದರೂ ಕೂಡ ನಾವೆಲ್ಲ ಒಂದಾಗಿ ಏಕತೆಯಿಂದ ಭವ್ಯ ಭಾರತದಲ್ಲಿ ಬಾಳುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ.
ಭಾರತ ಮಾತೆಯ ಮಕ್ಕಳಾದ ನಾವೆಲ್ಲ ಎಂದಿಗೂ ಪರಸ್ಪರರ ಧರ್ಮ, ಭಾಷೆ ಹಾಗೂ ಸಂಸ್ಕೃತಿಯನ್ನು ಗೌರವಿಸುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಸಾಮರಸ್ಯದಿಂದ ಬಾಳಿದರೆ ಮಾತ್ರ ನಾವು ಶತ್ರುಗಳನ್ನು ಸೆದೆಬಡಿಯಲು ಸಾಧ್ಯವಿದೆ. ಅಲ್ಲದೇ ನಮ್ಮ ಪೂರ್ವಜರು ನಮಗೆ ಸ್ವಾತಂತ್ರ್ಯವನ್ನು ತಂದುಕೊಟ್ಟಿರುವುದು ಇಂದು ನಾವು ಧರ್ಮಕ್ಕಾಗಿ , ಭಾಷೆಗಾಗಿ ಹೋರಾಡಲಿ ಎಂದಲ್ಲ. ಬದಲಾಗಿ ಭಾರತದಲ್ಲಿ ಒಗ್ಗಟ್ಟಿನಿಂದ ಬಾಳಲಿ ಎಂದಾಗಿದೆ. ಹೀಗಾಗಿ ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸಿನ ಭಾರತ ನಿರ್ಮಿಸಲು ಒಂದಾಗಬೇಕಿದೆ. ಸ್ವಾತಂತ್ರ್ಯ ದಿನವಾದ ಇಂದು ನಾವು ದೇಶದಲ್ಲಿ ಏಕತೆ, ಶಾಂತಿ ಹಾಗೂ ಅಭಿವೃದ್ಧಿಯನ್ನು ಸಾಧಿಸಲು ಒಂದಾಗಿ ಪ್ರತಿಜ್ಞೆ ತೊಡೋಣ ಎಂದು ಜಿಲ್ಲಾ ಕೆ ಡಿ ಪಿ ಸದಸ್ಯ ನೋಟರಿ ನ್ಯಾಯವಾದಿ ಸಂತೋಷ್ ಕುಮಾರ್ ಲೈಲಾ ನುಡಿದರು. ಅವರು ಇಂದು ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿ ಇಲ್ಲಿ 78 ನೇ ವರ್ಷದ ಸ್ವಾತಂತ್ರೋಸ್ಥವದ ಧ್ವಜಾರೋಹಣ ಮಾಡಿ ಮಕ್ಕಳಿಗೆ ಸಂದೇಶ ಸಾರಿದರು.
ಈ ಸಂದರ್ಬದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೀನಾ, ಪಿಯೂಸಿ ಕಾಲೇಜಿನ ಪ್ರಾಚಾರ್ಯರಾದ ಸಿಸ್ಟೆರ್ , ಪಿಟಿಎ ಉಪಾದ್ಯಕ್ಷರಾದ ಜಗನ್ನಾಥ ಪುತ್ರಬೈಲು, ಹಳೆ ವಿದ್ಯಾರ್ಥಿ ಸಂಘದ ಉಪಾದ್ಯಕ್ಷರಾದ ನಾರಾಯಣ ಶೆಟ್ಟಿ ಉಪಸ್ಥರಿದ್ದರು.

Related posts

ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ: ಎಸ್.ಡಿ.ಎಂ. ಪಿಯು ಕಾಲೇಜಿನ 24 ವಿದ್ಯಾರ್ಥಿಗಳಿಗೆ ಅತ್ಯುನ್ನತ ಶ್ರೇಣಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
error: Content is protected !!