25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

ಪಟ್ರಮೆ: ತಾವು ಹೊತ್ತ ಕನಸಿನ ಸ್ವತಂತ್ರ ಭಾರತದ ಸ್ಥಾಪನೆಗೆ ಬೇಕಾಗಿ ಅದೆಷ್ಟೋ ತ್ಯಾಗ ಬಲಿದಾನಗಳ ಮೂಲಕ ಹೋರಾಡಿದ ಹಿರಿಯ ಮಹಾತ್ಮರೆಲ್ಲರ ನೆನೆಯುವ ದಿನ ಮತ್ತು ಅವರು ನಡೆದ ದಾರಿಯಲ್ಲಿ ನಡೆಯಲು ಪ್ರೇರಣೆ ನೀಡುವ ದಿನವೇ ಸ್ವಾತಂತ್ರೋತ್ಸವ ಎಂದು ಸಿಐಟಿಯು ನಾಯಕ ಬಿ.ಎಂ.ಭಟ್ ಹೇಳಿದರು.

ಅವರು ಪಟ್ರಮೆಯ ಜುಮ್ಮಾ ಮಸೀದಿಯಲ್ಲಿ ನಡೆದ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣಗೈದು ಮಾತಾಡುತ್ತಿದ್ದರು.

ನಮ್ಮ ಬದುಕಿನ ಮೇಲೆ ಕಾಳಜಿ ಹೊಂದಿ ಪ್ರಜಾಪ್ರಭುತ್ವ ವ್ಯವಸ್ಥೆ ತಂದು ಕೊಟ್ಟದ್ದನ್ನು ಅನುಭವಿಸಿದರೆ ಸಾಲದು, ಆ ಬದುಕನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲೆ ಇದೆ ಎಂದರು.

ಕಾರ್ಯಕ್ರಮದಲ್ಲಿ ಮಸೀದಿ ಅಧ್ಯಕ್ಷ ಮಹಮ್ಮದ್ ಹನೀಫ್, ಕಾರ್ಯದರ್ಶಿ ಅನ್ಸಪ್, ಖಜಾಂಜಿ ಎನ್.ಎಸ್.ನಾಸಿರ್, ಮಹಮ್ಮದ್ ಪಿ, ಸಿಐಟಿಯು ಮುಖಂಡರಾದ ಧನಂಜಯ ಗೌಡ, ಸಿಪಿಐಎಂ ಮುಖಂಡರೂ ಮಾಜಿ ಪಂಚಾಯತು ಸದಸ್ಯರೂ ಆದ ಮಹಮ್ಮದ್ ಅನಸ್, ಮೊದಲಾದವರು ಉಪಸ್ಥಿತರಿದ್ದರು.

ರಾಷ್ಟ್ರಗೀತೆ ಹಾಡಿದ ಬಳಿಕ ಮದರಸದ ಪುಟ್ಟ ವಿದ್ಯಾರ್ಥಿಗಳು ಸಾರೇ ಜಹಾಂಸೆ ಅಚ್ಚಾ ಹಾಡು ಹಾಡಿ ಗಮನ ಸೆಳೆದರು. ಮಸೀದಿಯ ಆವರಣ ತಳಿರು ತೋರಣಗಳಿಂದ ಕಂಗೊಳಿಸುತ್ತಿತ್ತು.

ಮಸೀದಿಯ ಗುರುಗಳಾದ ತಮೀಮ್ ಅನ್ಸಾರಿ ಕುಂಡಾಜೆ(ಖತೀಬರು ಪಟ್ರಮೆ) ಸ್ವಾಗತಿಸಿ, ವಂದಿಸಿದರು.

Related posts

ಹೊಸ್ಮಾರು ಕುಲಾಲ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 2 ಲಕ್ಷದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಮಾಶಾಸನ ಹೆಚ್ಚಳ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಮನವಿ

Suddi Udaya

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿ ಬೆಂಬಲ

Suddi Udaya

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

Suddi Udaya
error: Content is protected !!