23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

ಪಟ್ರಮೆ: ತಾವು ಹೊತ್ತ ಕನಸಿನ ಸ್ವತಂತ್ರ ಭಾರತದ ಸ್ಥಾಪನೆಗೆ ಬೇಕಾಗಿ ಅದೆಷ್ಟೋ ತ್ಯಾಗ ಬಲಿದಾನಗಳ ಮೂಲಕ ಹೋರಾಡಿದ ಹಿರಿಯ ಮಹಾತ್ಮರೆಲ್ಲರ ನೆನೆಯುವ ದಿನ ಮತ್ತು ಅವರು ನಡೆದ ದಾರಿಯಲ್ಲಿ ನಡೆಯಲು ಪ್ರೇರಣೆ ನೀಡುವ ದಿನವೇ ಸ್ವಾತಂತ್ರೋತ್ಸವ ಎಂದು ಸಿಐಟಿಯು ನಾಯಕ ಬಿ.ಎಂ.ಭಟ್ ಹೇಳಿದರು.

ಅವರು ಪಟ್ರಮೆಯ ಜುಮ್ಮಾ ಮಸೀದಿಯಲ್ಲಿ ನಡೆದ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣಗೈದು ಮಾತಾಡುತ್ತಿದ್ದರು.

ನಮ್ಮ ಬದುಕಿನ ಮೇಲೆ ಕಾಳಜಿ ಹೊಂದಿ ಪ್ರಜಾಪ್ರಭುತ್ವ ವ್ಯವಸ್ಥೆ ತಂದು ಕೊಟ್ಟದ್ದನ್ನು ಅನುಭವಿಸಿದರೆ ಸಾಲದು, ಆ ಬದುಕನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲೆ ಇದೆ ಎಂದರು.

ಕಾರ್ಯಕ್ರಮದಲ್ಲಿ ಮಸೀದಿ ಅಧ್ಯಕ್ಷ ಮಹಮ್ಮದ್ ಹನೀಫ್, ಕಾರ್ಯದರ್ಶಿ ಅನ್ಸಪ್, ಖಜಾಂಜಿ ಎನ್.ಎಸ್.ನಾಸಿರ್, ಮಹಮ್ಮದ್ ಪಿ, ಸಿಐಟಿಯು ಮುಖಂಡರಾದ ಧನಂಜಯ ಗೌಡ, ಸಿಪಿಐಎಂ ಮುಖಂಡರೂ ಮಾಜಿ ಪಂಚಾಯತು ಸದಸ್ಯರೂ ಆದ ಮಹಮ್ಮದ್ ಅನಸ್, ಮೊದಲಾದವರು ಉಪಸ್ಥಿತರಿದ್ದರು.

ರಾಷ್ಟ್ರಗೀತೆ ಹಾಡಿದ ಬಳಿಕ ಮದರಸದ ಪುಟ್ಟ ವಿದ್ಯಾರ್ಥಿಗಳು ಸಾರೇ ಜಹಾಂಸೆ ಅಚ್ಚಾ ಹಾಡು ಹಾಡಿ ಗಮನ ಸೆಳೆದರು. ಮಸೀದಿಯ ಆವರಣ ತಳಿರು ತೋರಣಗಳಿಂದ ಕಂಗೊಳಿಸುತ್ತಿತ್ತು.

ಮಸೀದಿಯ ಗುರುಗಳಾದ ತಮೀಮ್ ಅನ್ಸಾರಿ ಕುಂಡಾಜೆ(ಖತೀಬರು ಪಟ್ರಮೆ) ಸ್ವಾಗತಿಸಿ, ವಂದಿಸಿದರು.

Related posts

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

Suddi Udaya

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Suddi Udaya

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

Suddi Udaya

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ರಾಜೇಶ್ ಪೈ ಅವರಿಗೆ ಉಜಿರೆ ವರ್ತಕರ ಸಂಘದಿಂದ ಗೌರವ ಸನ್ಮಾನ-ಉಜಿರೆ ನನ್ನನ್ನು ಬೆಳೆಸಿದ, ಪೋಷಿಸಿದ ಊರು: ಉದ್ಯಮಿ ರಾಜೇಶ್ ಪೈ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ

Suddi Udaya
error: Content is protected !!