26.1 C
ಪುತ್ತೂರು, ಬೆಳ್ತಂಗಡಿ
September 10, 2026
ಸಾಧಕರು

ಅತ್ಯುನ್ನತ ಸೇವೆಗಾಗಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದ ವಿಜಯ ಕುಮಾರ್ ಕೆಲ್ಲಗುತ್ತು ರವರಿಗೆ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ರಿಂದ ಸ್ಮರಣಿಕೆ ನೀಡಿ ಗೌರವ

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅತ್ಯುನ್ನತ ಸೇವೆಗಾಗಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದ
ಉಡುಪಿ ಜಿಲ್ಲಾ ಪೊಲೀಸ್‌ ಕಚೇರಿಯ ಡಿಸಿಆರ್ ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್ ಸ್ಟೇಬಲ್ ಆಗಿ ಸೇವೆಸಲ್ಲಿಸುತ್ತಿರುವ ಬೆಳ್ತಂಗಡಿಯ ವಿಜಯ ಕುಮಾರ್ ಕೆಲ್ಲ ಗುತ್ತು ಅವರನ್ನು ಬೆಂಗಳೂರಿ ನಲ್ಲಿ ಕರ್ನಾಟಕ ದ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ಐಪಿಎಸ್ ರವರು ಆ.15 ಸ್ವಾತಂತ್ರ ದಿನದಂದು ರಾಷ್ಟಪತಿ
ಪದಕ ಪಡೆದ ಬಗ್ಗೆ ಅಭಿನಂದನೆ ನೀಡಿ ಪೊಲೀಸ್ ಇಲಾಖೆ ಪರವಾಗಿ ಸ್ಮರಣಿಕೆ ಯನ್ನು ನೀಡಿ ಕುಟುಂಬದ ಸದಸ್ಯರ ಜೊತೆ ಗೌರವಿಸಿದರು. ಈ ಸಂದರ್ಭದಲ್ಲಿ ಪತ್ನಿ ಶ್ರೀಮತಿ ಸುಚಿತ್ರ ಬಿ. ಮಗಳು ಪೂರ್ವಿಕ ಇದ್ದರು.

ವಿಜಯ್ ಕುಮಾರ್ 1993ರಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಗೊಂಡು, 31 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಈವರೆಗೆ ಪಣಂಬೂರು, ಪುತ್ತೂರು ನಗರ, ಉರ್ವ, ಉಡುಪಿ ನಗರ, ಕುಂದಾಪುರ, ಉಡುಪಿ ಟ್ರಾಫಿಕ್, ಉಡುಪಿ ಮಹಿಳಾ ಠಾಣೆ ಮತ್ತು ಹಿರಿಯಡ್ಕ ಠಾಣೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ. 2022ರಲ್ಲಿ ಇವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದರು. ಇವರು ಬೆಳ್ತಂಗಡಿಯ ಕೆಲ್ಲಗುತ್ತು ನಿವಾಸಿಯಾಗಿದ್ದು, ದಿ. ಗೋಪಾಲಕೃಷ್ಣ ಮತ್ತು ಶಾರದಾ ದಂಪತಿಯ ಸುಪುತ್ರರಾಗಿರುತ್ತಾರೆ.

Related posts

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ, ಜಯರಾಮ ನೆಲ್ಲಿತ್ತಾಯರಿಗೆ “ಸಮಾಜ ಭೂಷಣ”ಪ್ರಶಸ್ತಿ

Suddi Udaya

ಭಾರತೀಯ ಭೂ ಸೇನೆಯಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕರ್ನಲ್ ನಿತಿನ್ ಆರ್. ಭಿಡೆಯವರಿಗೆ ವಿವಿಧ ಸಂಘ-ಸಂಸ್ಥೆಗಳಿಂದ ಅಭಿನಂದನೆ

Suddi Udaya
error: Content is protected !!