25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಾಧಕರು

ಅತ್ಯುನ್ನತ ಸೇವೆಗಾಗಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದ ವಿಜಯ ಕುಮಾರ್ ಕೆಲ್ಲಗುತ್ತು ರವರಿಗೆ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ರಿಂದ ಸ್ಮರಣಿಕೆ ನೀಡಿ ಗೌರವ

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅತ್ಯುನ್ನತ ಸೇವೆಗಾಗಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದ
ಉಡುಪಿ ಜಿಲ್ಲಾ ಪೊಲೀಸ್‌ ಕಚೇರಿಯ ಡಿಸಿಆರ್ ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್ ಸ್ಟೇಬಲ್ ಆಗಿ ಸೇವೆಸಲ್ಲಿಸುತ್ತಿರುವ ಬೆಳ್ತಂಗಡಿಯ ವಿಜಯ ಕುಮಾರ್ ಕೆಲ್ಲ ಗುತ್ತು ಅವರನ್ನು ಬೆಂಗಳೂರಿ ನಲ್ಲಿ ಕರ್ನಾಟಕ ದ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ಐಪಿಎಸ್ ರವರು ಆ.15 ಸ್ವಾತಂತ್ರ ದಿನದಂದು ರಾಷ್ಟಪತಿ
ಪದಕ ಪಡೆದ ಬಗ್ಗೆ ಅಭಿನಂದನೆ ನೀಡಿ ಪೊಲೀಸ್ ಇಲಾಖೆ ಪರವಾಗಿ ಸ್ಮರಣಿಕೆ ಯನ್ನು ನೀಡಿ ಕುಟುಂಬದ ಸದಸ್ಯರ ಜೊತೆ ಗೌರವಿಸಿದರು. ಈ ಸಂದರ್ಭದಲ್ಲಿ ಪತ್ನಿ ಶ್ರೀಮತಿ ಸುಚಿತ್ರ ಬಿ. ಮಗಳು ಪೂರ್ವಿಕ ಇದ್ದರು.

ವಿಜಯ್ ಕುಮಾರ್ 1993ರಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಗೊಂಡು, 31 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಈವರೆಗೆ ಪಣಂಬೂರು, ಪುತ್ತೂರು ನಗರ, ಉರ್ವ, ಉಡುಪಿ ನಗರ, ಕುಂದಾಪುರ, ಉಡುಪಿ ಟ್ರಾಫಿಕ್, ಉಡುಪಿ ಮಹಿಳಾ ಠಾಣೆ ಮತ್ತು ಹಿರಿಯಡ್ಕ ಠಾಣೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ. 2022ರಲ್ಲಿ ಇವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದರು. ಇವರು ಬೆಳ್ತಂಗಡಿಯ ಕೆಲ್ಲಗುತ್ತು ನಿವಾಸಿಯಾಗಿದ್ದು, ದಿ. ಗೋಪಾಲಕೃಷ್ಣ ಮತ್ತು ಶಾರದಾ ದಂಪತಿಯ ಸುಪುತ್ರರಾಗಿರುತ್ತಾರೆ.

Related posts

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕ : ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಗೌರವ ಪುರಸ್ಕಾರ

Suddi Udaya

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರು
ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿ ಗೆ ಆಯ್ಕೆ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ 10ನೇ ಬಾರಿಗೆ’ ಸಾಧನ ಶ್ರೀ ಪ್ರಶಸ್ತಿ ‘

Suddi Udaya
error: Content is protected !!