25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ ಆ.24 ರಂದು ಮಧ್ಯಾಹ್ನ 2.00 ಕ್ಕೆ ನಡೆಯಲಿದೆ.

ಸ್ಪರ್ಧೆಯಲ್ಲಿ ಮುದ್ದು ಕೃಷ್ಣ 0-3 ವರ್ಷ, ಬಾಲ ಕೃಷ್ಣ 4-7 ವರ್ಷ, ರಾಧಾ ಕೃಷ್ಣ 8-12 ವರ್ಷದ ಮಕ್ಕಳಿಗೆ ಮಾತ್ರ ಅವಕಾಶ. ಸ್ಪರ್ಧಾ ನೋಂದಾವಣೆಗೆ ಆಗಸ್ಟ್ 22 ಕೊನೆಯ ದಿನಾಂಕವಾಗಿದೆ.

ಸ್ಪರ್ಧೆಯ ನಿಬಂಧನೆಗಳು: ಬೆಳ್ತಂಗಡಿ ತಾಲೂಕಿನವರಿಗೆ ಮಾತ್ರ ಅವಕಾಶ. ಸ್ಪರ್ಧಾಳುಗಳು ಸಮಯಕ್ಕೆ ಸರಿಯಾಗಿ ಹಾಜಾರಿರಬೇಕು. ನೋಂದಾವಣೆ ಸಮಯ ಆಧಾರ್ ಕಾರ್ಡ್ ಕಡ್ಡಾಯ. ಪ್ರತೀ ವಿಭಾಗದಲ್ಲೂ ಸ್ಪರ್ಧಿಗಳಿಗೆ 1-2 ನಿಮಿಷದ ಸಮಯಾವಕಾಶ ನೀಡಲಾಗುವುದು. ಸ್ಪರ್ಧೆಗೆ ಬೇಕಾದ ವೇಷಭೂಷಣ ಮತ್ತು ಹಾಡನ್ನು ತಾವೇ ತಯಾರಿ ಮಾಡಿಕೊಂಡು ಬರತಕ್ಕದ್ದು. ವೇಷಭೂಷಣ, ಹಾವ-ಭಾವಗಳನ್ನು ತೀರ್ಪುಗಾರಿಕೆಗೆ ಪರಿಗಣಿಸಲಾಗುವುದು. ಸಂಘಟಕರ ಮತ್ತು ತೀರ್ಪುಗಾರರ ತೀರ್ಮಾನವೇ ಅಂತಿಮ. ವಿಜೇತರಿಗೆ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಎಲ್ಲಾ ಸ್ಪರ್ಧಿಗಳ ಫೋಟೊ/ ವೀಡಿಯೋವನ್ನು ಮುಳಿಯ ಫೇಸ್‌ಬುಕ್ ಪೇಜ್ ನಲ್ಲಿ ಹಾಕಲಾಗುವುದು.

ನೋಂದಾವಣೆಗಾಗಿ – 9343004916 / 87925 30916

Related posts

ಬೆಳ್ತಂಗಡಿ ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ: ಬಿನುತಾ ಬಂಗೇರರವರ ಸಾರಥ್ಯದಲ್ಲಿ,ಬಂಗೇರ ಬ್ರಿಗೇಡ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

Suddi Udaya

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya
error: Content is protected !!