July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ ಆ.24 ರಂದು ಮಧ್ಯಾಹ್ನ 2.00 ಕ್ಕೆ ನಡೆಯಲಿದೆ.

ಸ್ಪರ್ಧೆಯಲ್ಲಿ ಮುದ್ದು ಕೃಷ್ಣ 0-3 ವರ್ಷ, ಬಾಲ ಕೃಷ್ಣ 4-7 ವರ್ಷ, ರಾಧಾ ಕೃಷ್ಣ 8-12 ವರ್ಷದ ಮಕ್ಕಳಿಗೆ ಮಾತ್ರ ಅವಕಾಶ. ಸ್ಪರ್ಧಾ ನೋಂದಾವಣೆಗೆ ಆಗಸ್ಟ್ 22 ಕೊನೆಯ ದಿನಾಂಕವಾಗಿದೆ.

ಸ್ಪರ್ಧೆಯ ನಿಬಂಧನೆಗಳು: ಬೆಳ್ತಂಗಡಿ ತಾಲೂಕಿನವರಿಗೆ ಮಾತ್ರ ಅವಕಾಶ. ಸ್ಪರ್ಧಾಳುಗಳು ಸಮಯಕ್ಕೆ ಸರಿಯಾಗಿ ಹಾಜಾರಿರಬೇಕು. ನೋಂದಾವಣೆ ಸಮಯ ಆಧಾರ್ ಕಾರ್ಡ್ ಕಡ್ಡಾಯ. ಪ್ರತೀ ವಿಭಾಗದಲ್ಲೂ ಸ್ಪರ್ಧಿಗಳಿಗೆ 1-2 ನಿಮಿಷದ ಸಮಯಾವಕಾಶ ನೀಡಲಾಗುವುದು. ಸ್ಪರ್ಧೆಗೆ ಬೇಕಾದ ವೇಷಭೂಷಣ ಮತ್ತು ಹಾಡನ್ನು ತಾವೇ ತಯಾರಿ ಮಾಡಿಕೊಂಡು ಬರತಕ್ಕದ್ದು. ವೇಷಭೂಷಣ, ಹಾವ-ಭಾವಗಳನ್ನು ತೀರ್ಪುಗಾರಿಕೆಗೆ ಪರಿಗಣಿಸಲಾಗುವುದು. ಸಂಘಟಕರ ಮತ್ತು ತೀರ್ಪುಗಾರರ ತೀರ್ಮಾನವೇ ಅಂತಿಮ. ವಿಜೇತರಿಗೆ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಎಲ್ಲಾ ಸ್ಪರ್ಧಿಗಳ ಫೋಟೊ/ ವೀಡಿಯೋವನ್ನು ಮುಳಿಯ ಫೇಸ್‌ಬುಕ್ ಪೇಜ್ ನಲ್ಲಿ ಹಾಕಲಾಗುವುದು.

ನೋಂದಾವಣೆಗಾಗಿ – 9343004916 / 87925 30916

Related posts

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಉದ್ಯೋಗಾವಕಾಶಗಳನ್ನು ಒದಗಿಸುವುದೇ ಗುರಿ – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಸಂಸ್ಥೆಗಳ ಜಾಗೃತಿ ಅಭಿಯಾನದ ವಾಹನ ತಾಲೂಕಿನಾದ್ಯಂತ ಮನೆ ಬಾಗಿಲಿಗೆ – ಚಾರ್ಮಾಡಿಯಿಂದ ಚಾಲನೆ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ

Suddi Udaya

ಜೆಸಿಐ ಬೆಳ್ತಂಗಡಿ ಜೆಸಿ ಸಪ್ತಾಹ ಅಂಗವಾಗಿ ಗಣೇಶ್ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya
error: Content is protected !!