23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

ಕಲ್ಮಂಜ:ಕಲ್ಮಂಜ ಗ್ರಾಮ‌ಪಂಚಾಯತ್ ನ 2024-25’ನೇ ಸಾಲಿನ ಮೊದಲ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ವಿಮಲ ಇವರ ಅಧ್ಯಕ್ಷತೆಯಲ್ಲಿ ಆ.16 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಪಶು ವೈದ್ಯಾಧಿಕಾರಿ ವಿಶ್ವನಾಥ ಸಿ.ಎನ್ ಅವರು ಗ್ರಾಮಸಭೆಯನ್ನು ಮುನ್ನಡೆಸಿದರು.

ಹಲವಡೆ ನೀರಿನ ಪೈಪುಗಳು ಒಡೆದು ಹೋಗಿ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುವುದಿಲ್ಲ ಎಂದು ಗ್ರಾಮಸ್ಥರೊರ್ವರು ತಿಳಿಸಿದರು.

ಸಿಎ ಬ್ಯಾಂಕ್ ಮತ್ತು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ನಿರ್ಮಿಸಲು ಕಲ್ಮಂಜದಲ್ಲಿ ಸರಕಾರಿ ಜಾಗವಿದೇಯೇ ಎಂದು ಗ್ರಾಮಸ್ಥರು ಕಂದಾಯ ಇಲಾಖಾ ಅಧಿಕಾರಿಯಲ್ಲಿ ತಿಳಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಲ್ಲರನ್ನು ಸ್ವಾಗತಿಸಿ,ಸಭೆಗೆ ವರದಿ ಮಂಡಿಸಿದರು. ಕಾರ್ಯದರ್ಶಿ ಸರೋಜಿನಿ ಕೆ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಯನ್ನು ಸಭೆಯ ಮುಂದಿಟ್ಟರು.

ರಾಧಾಕೃಷ್ಣ ಗೌಡ, ಲೀಲಾ, ಸವಿತಾ, ಪ್ರವೀಣ, ವರದಾಕ್ಷ ಆಚಾರ್ಯ, ಎಂ.ಶ್ರೀಧರ,ಕೃಷ್ಣಮೂರ್ತಿ, ಶೋಭಾವತಿ ಉಪಸ್ಥಿತರಿದ್ದರು.

ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ,ಆಶಾ ಕಾರ್ಯಕರ್ತರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ನಾರಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

Suddi Udaya

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya
error: Content is protected !!