July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

ಕಲ್ಮಂಜ:ಕಲ್ಮಂಜ ಗ್ರಾಮ‌ಪಂಚಾಯತ್ ನ 2024-25’ನೇ ಸಾಲಿನ ಮೊದಲ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ವಿಮಲ ಇವರ ಅಧ್ಯಕ್ಷತೆಯಲ್ಲಿ ಆ.16 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಪಶು ವೈದ್ಯಾಧಿಕಾರಿ ವಿಶ್ವನಾಥ ಸಿ.ಎನ್ ಅವರು ಗ್ರಾಮಸಭೆಯನ್ನು ಮುನ್ನಡೆಸಿದರು.

ಹಲವಡೆ ನೀರಿನ ಪೈಪುಗಳು ಒಡೆದು ಹೋಗಿ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುವುದಿಲ್ಲ ಎಂದು ಗ್ರಾಮಸ್ಥರೊರ್ವರು ತಿಳಿಸಿದರು.

ಸಿಎ ಬ್ಯಾಂಕ್ ಮತ್ತು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ನಿರ್ಮಿಸಲು ಕಲ್ಮಂಜದಲ್ಲಿ ಸರಕಾರಿ ಜಾಗವಿದೇಯೇ ಎಂದು ಗ್ರಾಮಸ್ಥರು ಕಂದಾಯ ಇಲಾಖಾ ಅಧಿಕಾರಿಯಲ್ಲಿ ತಿಳಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಲ್ಲರನ್ನು ಸ್ವಾಗತಿಸಿ,ಸಭೆಗೆ ವರದಿ ಮಂಡಿಸಿದರು. ಕಾರ್ಯದರ್ಶಿ ಸರೋಜಿನಿ ಕೆ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಯನ್ನು ಸಭೆಯ ಮುಂದಿಟ್ಟರು.

ರಾಧಾಕೃಷ್ಣ ಗೌಡ, ಲೀಲಾ, ಸವಿತಾ, ಪ್ರವೀಣ, ವರದಾಕ್ಷ ಆಚಾರ್ಯ, ಎಂ.ಶ್ರೀಧರ,ಕೃಷ್ಣಮೂರ್ತಿ, ಶೋಭಾವತಿ ಉಪಸ್ಥಿತರಿದ್ದರು.

ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ,ಆಶಾ ಕಾರ್ಯಕರ್ತರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

Suddi Udaya

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!