September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

ಇಂದಬೆಟ್ಟು: ಇಲ್ಲಿಯ ಇತಿಹಾಸ ಪ್ರಸಿದ್ಧ ಶ್ರೀ ಅರ್ಧನಾರೀಶ್ವರಿ ದೇವಸ್ಥಾನದ ರಸ್ತೆ ತೀರಾ ಹದಗೆಟ್ಟಿದೆ. ಇದರಿಂದಾಗಿ ಬೆಸೆತ್ತ ಮಾಜಿ ಗ್ರಾಮ ಪಂಚಾಯತ್ ಸದಸ್ಯ, ಸಾಮಾಜಿಕ ಹೋರಾಟಗಾರ ವಿಶಿಷ್ಟವಾಗಿ ತನ್ನ ಆಕ್ರೋಶ ವ್ಯಕ್ತಪಡಿಸಿ ಬ್ಯಾನರ್ ಅಳವಡಿಸಿದ್ದು , ಈ ಬ್ಯಾನರ್ ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಚರ್ಚೆಗೆ ಗ್ರಾಸವಾಗಿದೆ.

ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಶ್ರೀ ಅರ್ಧನಾರೀಶ್ವರಿ ದೇವಸ್ಥಾನ ಅತ್ಯಂತ ಪುರಾತನವಾಗಿದ್ದು , ಇತಿಹಾಸ ಪ್ರಸಿದ್ಧವಾಗಿದೆ. ದಿನನಿತ್ಯ ನೂರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಇಲ್ಲಿ ಭಕ್ತರು ಕಾಲ್ನಡಿಗೆ , ವಾಹನಗಳಲ್ಲಿ ಸಂಚರಿಸಲು ಅಸಾಧ್ಯವಾದ ಸ್ಥಿತಿಯಲ್ಲಿ ರಸ್ತೆ ಅವ್ಯವಸ್ಥೆಯಾಗಿದೆ. ಈ ಬಗ್ಗೆ ಶಾಸಕರು ಸೇರಿದಂತೆ ಜನಪ್ರತಿನಿಧಿಗಳಿಗೆ ,ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇಂದಬೆಟ್ಟು ಗ್ರಾಮಸಭೆಯಲ್ಲೂ ಈ ಬಗ್ಗೆ ವ್ಯಾಪಕ ಚರ್ಚೆಯಾಗಿದೆ , ಆದರೂ ಪರಿಹಾರ ಶೂನ್ಯವಾಗಿದೆ.

ಇದರಿಂದ ಬೆಸೆತ್ತ ಮಾಜಿ ಗ್ರಾಮ ಪಂಚಾಯತ್ ಸದಸ್ಯ , ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೋಟ್ಯಾನ್ ರವರು ದೇವಸ್ಥಾನಕ್ಕೆ ತೆರಳುವ ರಸ್ತೆ ಬದಿಯಲ್ಲಿ ” ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆಯ ಕಾಮಗಾರಿ ಮಾಡಲು ತಮ್ಮಿಂದ 1 ರೂಪಾಯಿ ಸಹಾಯಧನ ನೀಡಬೇಕಾಗಿ ವಿನಂಬ್ರ ವಿನಂತಿ ” ಎಂದು ಕೈ ಬರಹದ ಬ್ಯಾನರ್ ಅಳವಡಿಸಿದ್ದು , ಅದರ ಕೆಳಗೆ ಬಕೆಟ್ ನ್ನು ಇಟ್ಟು ತನ್ನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬ್ಯಾನರ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದು , ಚರ್ಚೆಗೂ ಗ್ರಾಸವಾಗಿದೆ‌.

Related posts

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸದಾನಂದ ಪೂಜಾರಿಯವರಿಗೆ ಸನ್ಮಾನ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ಸಂಸ್ಕೃತ ಉಪನ್ಯಾಸಕ ರಘು ಬಿಜೂರ್ ರಿಗೆ ರಾಜ್ಯ ಗಾನಸಿರಿ ಕರ್ನಾಟಕ ಭೂಷಣ ಪ್ರಶಸ್ತಿ

Suddi Udaya

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

Suddi Udaya

ಮಡಂತ್ಯಾರು ಸಿಎ ಬ್ಯಾಂಕ್‌ ವತಿಯಿಂದ ಮಡಂತ್ಯಾರು ಗ್ರಾ.ಪಂ. ಹಾಗೂ ಮಾಲಾಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!