23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

ಬೆಳ್ತಂಗಡಿ: ಆ 15 ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಹ್ಯೂಮನಿಟೆರಿಯನ್ ದಿನದ ಪ್ರಯುಕ್ತ ಹ್ಯೂಮನಿಟೆರಿಯನ್ ಸಂಸ್ಥೆ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಫಾ. ಆದರ್ಶ್ ಜೋಸೆಫ್ ಅವರಿಗೆ ” ಹ್ಯೂಮನಿಟೀರಿಯನ್ ಎಕ್ಸಲೆನ್ಸ್ ಅವಾರ್ಡ್ 2024 ” ನೀಡಿ ಗೌರವಿಸಲಾಯಿತ್ತು.

ಕೇಂದ್ರ ಸರಕಾರದ ಮಾಜಿ ಸಚಿವ ಸಂತೋಷ್ ಬಗ್ರೋಡಿಯಾ ಹಾಗೂ ಕಿರುತೆರೆ ತಾರೆ ಸುರೇಂದ್ರ ಪಾಲ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಕೋವಿಡ್ 19 ರ ಸಂದರ್ಭದಲ್ಲಿ ಗ್ರಾಮ ಮಟ್ಟದಲ್ಲಿ ಮಾಡಿದ ಸಮಾಜಸೇವೆಯನ್ನು ಸಂಸ್ಥೆ ಶ್ಲಾಘಸಿದರು. ತನ್ನ ವೈಯಕ್ತಿಕ ವಾಹನದಲ್ಲಿ ನೂರಕ್ಕೂ ಅಧಿಕ ಕೋವಿಡ್ ರೋಗಿಗಳನ್ನು ಆಸ್ಪತ್ರೆ ಹಾಗೂ ಕೋವಿಡ್ ಸೆಂಟರ್ ಗಳಿಗೆ ಉಚಿತವಾಗಿ ರವಾನೆ ಮಾಡುವುದರ ಮೂಲಕ ಹಲವಾರು ಜನರ ಪ್ರಾಣ ಉಳಿಸುವಲ್ಲಿ ಯಶ್ವಸಿಯಾದರು. ಅದು ಅಲ್ಲದೆ ಹತ್ತು ಹಲವಾರು ಸಮಾಜಮುಖಿ ಕಾರ್ಯಕ್ರಮದಲ್ಲಿ ತನ್ನನೇ ತೊಡಗಿಸಿಕೊಂಡು ಜಾತಿ, ಧರ್ಮ ವ್ಯತ್ಯಾಸವಿಲ್ಲದೆ ಮಾಡುವ ಮಾನವ ಸೇವೆಯನ್ನು ಸಂಸ್ಥೆ ಗುರುತಿಸಿಕೊಂಡರು. ಧರ್ಮದ ಅಂತರ ಬಿಟ್ಟು ಎಲ್ಲರನ್ನು ಒಟ್ಟುಸೇರಿಸಿ ಸಮಾಜದಲ್ಲಿ ಸಾಮರಸ್ಯ ಬೆಳೆಸಬೇಕೆಂಬ ಉದ್ದೇಶದಿಂದ ಹಲವಾರು ಕಾರ್ಯಕ್ರಮದ ಮೂಲಕ ಸೌಹಾರ್ದತೆಯ ಸಂದೇಶವನ್ನು ಸಮಾಜಕ್ಕೆ ಸಾರುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಾರೆ.

ಪ್ರಸ್ತುತ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಗುತ್ತಿಗಾರು ಹಾಗೂ ನೆಟ್ಟಣ ಚರ್ಚಿನ ಧರ್ಮಗುರುಗಳಾಗಿ ಸೇವೆ ಸಲ್ಲಿಸುತಾರೆ.

Related posts

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಇಂದಬೆಟ್ಟು: ಮನ್ನಡ್ಕ ನಿವಾಸಿ ಮಿನ್ಕಿ ಗೌಡ ನಿಧನ

Suddi Udaya

ಬಳಂಜ: ಬಂಟರ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ದಿ. ಅನಿಲ್ ನಾಯ್ಗ ಟ್ರೋಫಿಯ ಕ್ರೀಡೋತ್ಸವ: ಸನ್ಮಾನ

Suddi Udaya

ಬೆಳ್ತಂಗಡಿ ಕುಂಬಾರರ ಸೇವಾ ಸಂಘದಿಂದ ರಾಜೀವ್ ಬಿ.ಎಚ್ ರವರಿಗೆ “ಕಲಾರತ್ನ” ಪ್ರಶಸ್ತಿ

Suddi Udaya
error: Content is protected !!