23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ರಾಷ್ಟ್ರಪ್ರೇಮದೊಂದಿಗೆ ಗುಣಾತ್ಮಕವಾದ ವಿಚಾರಗಳನ್ನು ಬೆಳೆಸಿಕೊಂಡು ಏಳಿಗೆಯನ್ನು ಹೊಂದುವುದು ಪ್ರತಿಯೊಬ್ಬರ ಧ್ಯೇಯವಾಗಬೇಕು ಎಂದು ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪ್ರಜ್ವಲಾ ಡಿ ಆರ್ ಹೇಳಿದರು.


ಅವರು ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಸ್ವತಂತ್ರ ಭಾರತದಲ್ಲಿ ನಾವು ನೆಮ್ಮದಿಯನ್ನು ಕಾಣಬೇಕಾದರೆ ಜನರನ್ನು ದಾರಿ ತಪ್ಪಿಸುವ ವಿಚಾರಗಳಿಂದ ದೂರ ಇರಬೇಕು. ಯುವ ಜನಾಂಗ ಆಧುನಿಕ ಎಲೆಕ್ಟ್ರಾನಿಕ್ ಮಾಧ್ಯಮಗಳನ್ನು ದುರುಪಯೋಗ ಪಡಿಸಿಕೊಳ್ಳದೆ ಜ್ಞಾನವನ್ನು ಹೊಂದುವಲ್ಲಿ ಬಳಸಿಕೊಳ್ಳಬೇಕು. ಯುವ ಪ್ರತಿಭೆಗಳು‌ ರಾಷ್ಟ್ರ ಅಭಿವೃದ್ಧಿಯ ಕನಸುಗಳನ್ನು ಕಾಣಬೇಕು. ಪ್ರತಿಭೆಗಳು ವಿದೇಶದ ಪಾಲಾಗದಂತೆ ನೋಡಿಕೊಳ್ಳಬೇಕು. ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಂಡು ನಡೆದಾಗ ಮಾತ್ರ ಸ್ವಾತಂತ್ರ ದಿನಾಚರಣೆಗೆ ಅರ್ಥ ಬರುತ್ತದೆ ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.
ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಸ್ವಾಗತಿಸಿದರು. ಉಪನ್ಯಾಸಕ ಮಹಾಬಲ ಗೌಡ ಧನ್ಯವಾದವಿತ್ತರು. ಉಪನ್ಯಾಸಕಿ ಲತಾಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಡಿ.21: ನಾರಾವಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಜೂ.27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!