April 11, 2025
Uncategorized

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

ವೇಣೂರು : ಇಲ್ಲಿಯ ಮಾರಗುತ್ತು ಮನೆ ನಿವಾಸಿ, ವೇಣೂರು ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿಗಳು, ದೈವದ ಗಡಿ ಪ್ರಧಾನರಾಗಿರುವ ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ಅವರು ಹೃದಯಾಘಾತದಿಂದ ಆ.16 ರಂದು ನಿಧನರಾಗಿದ್ದಾರೆ. ಸುಮಾರು 3ದಶಕ ಕ್ಕೂ ಮಿಕ್ಕಿ ವಿಜ್ಞಾನ ದ ಅಧ್ಯಾಪಕರಾಗಿ ಜನಾನು ರಾಗಿ ಗಳಾಗಿದ್ದರು ಜೈನ ಧರ್ಮ ಹಾಗೂ ಹಿಂಧೂ ಧರ್ಮ ವಿವೇಕಾನಂದ ಚಿಂತನೆ ಗಳ ಬಗ್ಗೆ ಅಳವಾ ದ ಅಭ್ಯಾಸ ಮಾಡಿದವರು ಉತ್ತಮ ಸಂಘಟಕಧಾರ್ಮಿಕ ಉಪನ್ಯಾಸ ಕಾರ ರಾಗಿ ಜನಪ್ರಿಯ ರಾಗಿದ್ದರು ಇವರು ಪ್ರಗತಿಪರ ಕೃಷಿಕರೂ ಆಗಿ ಧಾರ್ಮಿಕ, ಸಮಾಜಸೇವೆಯಲ್ಲೇ ಸಮಯ ಕಳೆಯುತ್ತಿದ್ದರು. ಮಾರಗುತ್ತು ಮಾರವಾಂಡಿ ದೈವದ ಗಡಿ ಪ್ರದಾನರಾಗಿ ಗ್ರಾಮದ ಜನತೆಗೆ ಮಾರ್ಗದರ್ಶಕರಾಗಿದ್ದರು. ಮುದ್ದಾಡಿ ಕ್ಷೇತ್ರದ ಆಡಳಿತ ಮೊಕ್ತೇಸರರಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾರಣರಾಗಿದ್ದರು. ವಿವೇಕಾನಂದ ಸೇವಾ ಟ್ರಸ್ಟ್ ಸ್ಥಾಪಿಸಿ ಸಮಾಜ ಸೇವೆಯಲ್ಲೂ ನಿರತರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ. ವಿಜಯರಾಜ ಅಧಿಕಾರಿ ಅವರು ಶ್ರೀ ಮಠ ದ ಶಿಷ್ಯ ವರ್ಗ ದವರಗಿದ್ದು ಸದಾ ಶ್ರೀ ಮಠ ದ ಸಂಪರ್ಕ ದಲ್ಲಿದ್ದರು ಅವರ ಅಗಲಿದ ಆತ್ಮಕ್ಕೆ ಉತ್ತಮ ಸದ್ಗತಿ ಪ್ರಾಪ್ತಿ ಯಾಗಲಿ ಅವರ ಅಗಲುವಿಕೆ ಯಿಂದ ಆಗಿರುವ ದುಃಖ್ಖ ವನ್ನು ಸಹಿಸುವ ಶಕ್ತಿ ಅವರ ಕುಟುಂಬ ವರ್ಗ ಕ್ಕೆ ಸಿಗಲಿ ಎಂದು ಶ್ರೀ ಜಿನೇಂದ್ರ ಭಗವಂತ ರಲ್ಲಿ ಪ್ರಾರ್ಥಿಸುತ್ತೇವೆ ಎಂದು ಜಗದ್ಗುರು ಡಾ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಶ್ರೀ ಜೈನ ದಿಗಂಬರ ಜೈನ ಮಠ, ಸ್ವಸ್ತಿ ಶ್ರೀ ಭಟ್ಟಾರಕ ನಗರ ಮೂಡುಬಿದಿರೆ ತಿಳಿಸಿದ್ದಾರೆ.

Related posts

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

Suddi Udaya
error: Content is protected !!