30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

ವೇಣೂರು : ಇಲ್ಲಿಯ ಮಾರಗುತ್ತು ಮನೆ ನಿವಾಸಿ, ವೇಣೂರು ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿಗಳು, ದೈವದ ಗಡಿ ಪ್ರಧಾನರಾಗಿರುವ ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ಅವರು ಹೃದಯಾಘಾತದಿಂದ ಆ.16 ರಂದು ನಿಧನರಾಗಿದ್ದಾರೆ. ಸುಮಾರು 3ದಶಕ ಕ್ಕೂ ಮಿಕ್ಕಿ ವಿಜ್ಞಾನ ದ ಅಧ್ಯಾಪಕರಾಗಿ ಜನಾನು ರಾಗಿ ಗಳಾಗಿದ್ದರು ಜೈನ ಧರ್ಮ ಹಾಗೂ ಹಿಂಧೂ ಧರ್ಮ ವಿವೇಕಾನಂದ ಚಿಂತನೆ ಗಳ ಬಗ್ಗೆ ಅಳವಾ ದ ಅಭ್ಯಾಸ ಮಾಡಿದವರು ಉತ್ತಮ ಸಂಘಟಕಧಾರ್ಮಿಕ ಉಪನ್ಯಾಸ ಕಾರ ರಾಗಿ ಜನಪ್ರಿಯ ರಾಗಿದ್ದರು ಇವರು ಪ್ರಗತಿಪರ ಕೃಷಿಕರೂ ಆಗಿ ಧಾರ್ಮಿಕ, ಸಮಾಜಸೇವೆಯಲ್ಲೇ ಸಮಯ ಕಳೆಯುತ್ತಿದ್ದರು. ಮಾರಗುತ್ತು ಮಾರವಾಂಡಿ ದೈವದ ಗಡಿ ಪ್ರದಾನರಾಗಿ ಗ್ರಾಮದ ಜನತೆಗೆ ಮಾರ್ಗದರ್ಶಕರಾಗಿದ್ದರು. ಮುದ್ದಾಡಿ ಕ್ಷೇತ್ರದ ಆಡಳಿತ ಮೊಕ್ತೇಸರರಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾರಣರಾಗಿದ್ದರು. ವಿವೇಕಾನಂದ ಸೇವಾ ಟ್ರಸ್ಟ್ ಸ್ಥಾಪಿಸಿ ಸಮಾಜ ಸೇವೆಯಲ್ಲೂ ನಿರತರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ. ವಿಜಯರಾಜ ಅಧಿಕಾರಿ ಅವರು ಶ್ರೀ ಮಠ ದ ಶಿಷ್ಯ ವರ್ಗ ದವರಗಿದ್ದು ಸದಾ ಶ್ರೀ ಮಠ ದ ಸಂಪರ್ಕ ದಲ್ಲಿದ್ದರು ಅವರ ಅಗಲಿದ ಆತ್ಮಕ್ಕೆ ಉತ್ತಮ ಸದ್ಗತಿ ಪ್ರಾಪ್ತಿ ಯಾಗಲಿ ಅವರ ಅಗಲುವಿಕೆ ಯಿಂದ ಆಗಿರುವ ದುಃಖ್ಖ ವನ್ನು ಸಹಿಸುವ ಶಕ್ತಿ ಅವರ ಕುಟುಂಬ ವರ್ಗ ಕ್ಕೆ ಸಿಗಲಿ ಎಂದು ಶ್ರೀ ಜಿನೇಂದ್ರ ಭಗವಂತ ರಲ್ಲಿ ಪ್ರಾರ್ಥಿಸುತ್ತೇವೆ ಎಂದು ಜಗದ್ಗುರು ಡಾ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಶ್ರೀ ಜೈನ ದಿಗಂಬರ ಜೈನ ಮಠ, ಸ್ವಸ್ತಿ ಶ್ರೀ ಭಟ್ಟಾರಕ ನಗರ ಮೂಡುಬಿದಿರೆ ತಿಳಿಸಿದ್ದಾರೆ.

Related posts

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ : ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಧರ್ಮಸ್ಥಳ: 26ನೇ ವರ್ಷದ ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರದ ಉಪನ್ಯಾಸ ಸರಣಿ ಕಾರ್ಯಕ್ರಮ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya
error: Content is protected !!