July 23, 2026
Uncategorized

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

ವೇಣೂರು : ಇಲ್ಲಿಯ ಮಾರಗುತ್ತು ಮನೆ ನಿವಾಸಿ, ವೇಣೂರು ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿಗಳು, ದೈವದ ಗಡಿ ಪ್ರಧಾನರಾಗಿರುವ ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ಅವರು ಹೃದಯಾಘಾತದಿಂದ ಆ.16 ರಂದು ನಿಧನರಾಗಿದ್ದಾರೆ. ಸುಮಾರು 3ದಶಕ ಕ್ಕೂ ಮಿಕ್ಕಿ ವಿಜ್ಞಾನ ದ ಅಧ್ಯಾಪಕರಾಗಿ ಜನಾನು ರಾಗಿ ಗಳಾಗಿದ್ದರು ಜೈನ ಧರ್ಮ ಹಾಗೂ ಹಿಂಧೂ ಧರ್ಮ ವಿವೇಕಾನಂದ ಚಿಂತನೆ ಗಳ ಬಗ್ಗೆ ಅಳವಾ ದ ಅಭ್ಯಾಸ ಮಾಡಿದವರು ಉತ್ತಮ ಸಂಘಟಕಧಾರ್ಮಿಕ ಉಪನ್ಯಾಸ ಕಾರ ರಾಗಿ ಜನಪ್ರಿಯ ರಾಗಿದ್ದರು ಇವರು ಪ್ರಗತಿಪರ ಕೃಷಿಕರೂ ಆಗಿ ಧಾರ್ಮಿಕ, ಸಮಾಜಸೇವೆಯಲ್ಲೇ ಸಮಯ ಕಳೆಯುತ್ತಿದ್ದರು. ಮಾರಗುತ್ತು ಮಾರವಾಂಡಿ ದೈವದ ಗಡಿ ಪ್ರದಾನರಾಗಿ ಗ್ರಾಮದ ಜನತೆಗೆ ಮಾರ್ಗದರ್ಶಕರಾಗಿದ್ದರು. ಮುದ್ದಾಡಿ ಕ್ಷೇತ್ರದ ಆಡಳಿತ ಮೊಕ್ತೇಸರರಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾರಣರಾಗಿದ್ದರು. ವಿವೇಕಾನಂದ ಸೇವಾ ಟ್ರಸ್ಟ್ ಸ್ಥಾಪಿಸಿ ಸಮಾಜ ಸೇವೆಯಲ್ಲೂ ನಿರತರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ. ವಿಜಯರಾಜ ಅಧಿಕಾರಿ ಅವರು ಶ್ರೀ ಮಠ ದ ಶಿಷ್ಯ ವರ್ಗ ದವರಗಿದ್ದು ಸದಾ ಶ್ರೀ ಮಠ ದ ಸಂಪರ್ಕ ದಲ್ಲಿದ್ದರು ಅವರ ಅಗಲಿದ ಆತ್ಮಕ್ಕೆ ಉತ್ತಮ ಸದ್ಗತಿ ಪ್ರಾಪ್ತಿ ಯಾಗಲಿ ಅವರ ಅಗಲುವಿಕೆ ಯಿಂದ ಆಗಿರುವ ದುಃಖ್ಖ ವನ್ನು ಸಹಿಸುವ ಶಕ್ತಿ ಅವರ ಕುಟುಂಬ ವರ್ಗ ಕ್ಕೆ ಸಿಗಲಿ ಎಂದು ಶ್ರೀ ಜಿನೇಂದ್ರ ಭಗವಂತ ರಲ್ಲಿ ಪ್ರಾರ್ಥಿಸುತ್ತೇವೆ ಎಂದು ಜಗದ್ಗುರು ಡಾ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಶ್ರೀ ಜೈನ ದಿಗಂಬರ ಜೈನ ಮಠ, ಸ್ವಸ್ತಿ ಶ್ರೀ ಭಟ್ಟಾರಕ ನಗರ ಮೂಡುಬಿದಿರೆ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

Suddi Udaya
error: Content is protected !!