23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ ಆ.24 ರಂದು ಮಧ್ಯಾಹ್ನ 2.00 ಕ್ಕೆ ನಡೆಯಲಿದೆ.

ಸ್ಪರ್ಧೆಯಲ್ಲಿ ಮುದ್ದು ಕೃಷ್ಣ 0-3 ವರ್ಷ, ಬಾಲ ಕೃಷ್ಣ 4-7 ವರ್ಷ, ರಾಧಾ ಕೃಷ್ಣ 8-12 ವರ್ಷದ ಮಕ್ಕಳಿಗೆ ಮಾತ್ರ ಅವಕಾಶ. ಸ್ಪರ್ಧಾ ನೋಂದಾವಣೆಗೆ ಆಗಸ್ಟ್ 22 ಕೊನೆಯ ದಿನಾಂಕವಾಗಿದೆ.

ಸ್ಪರ್ಧೆಯ ನಿಬಂಧನೆಗಳು: ಬೆಳ್ತಂಗಡಿ ತಾಲೂಕಿನವರಿಗೆ ಮಾತ್ರ ಅವಕಾಶ. ಸ್ಪರ್ಧಾಳುಗಳು ಸಮಯಕ್ಕೆ ಸರಿಯಾಗಿ ಹಾಜಾರಿರಬೇಕು. ನೋಂದಾವಣೆ ಸಮಯ ಆಧಾರ್ ಕಾರ್ಡ್ ಕಡ್ಡಾಯ. ಪ್ರತೀ ವಿಭಾಗದಲ್ಲೂ ಸ್ಪರ್ಧಿಗಳಿಗೆ 1-2 ನಿಮಿಷದ ಸಮಯಾವಕಾಶ ನೀಡಲಾಗುವುದು. ಸ್ಪರ್ಧೆಗೆ ಬೇಕಾದ ವೇಷಭೂಷಣ ಮತ್ತು ಹಾಡನ್ನು ತಾವೇ ತಯಾರಿ ಮಾಡಿಕೊಂಡು ಬರತಕ್ಕದ್ದು. ವೇಷಭೂಷಣ, ಹಾವ-ಭಾವಗಳನ್ನು ತೀರ್ಪುಗಾರಿಕೆಗೆ ಪರಿಗಣಿಸಲಾಗುವುದು. ಸಂಘಟಕರ ಮತ್ತು ತೀರ್ಪುಗಾರರ ತೀರ್ಮಾನವೇ ಅಂತಿಮ. ವಿಜೇತರಿಗೆ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಎಲ್ಲಾ ಸ್ಪರ್ಧಿಗಳ ಫೋಟೊ/ ವೀಡಿಯೋವನ್ನು ಮುಳಿಯ ಫೇಸ್‌ಬುಕ್ ಪೇಜ್ ನಲ್ಲಿ ಹಾಕಲಾಗುವುದು.

ನೋಂದಾವಣೆಗಾಗಿ – 9343004916 / 87925 30916

Related posts

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya

ಫೆ.14: ಧರ್ಮಸ್ಥಳ ಕಲ್ಲೇರಿಯಲ್ಲಿ ನೂತನ ಸುನಿಲ್ ರೆಡಿವೇರ್ಸ್ ಶುಭಾರಂಭ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya
error: Content is protected !!