37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

ಕಲ್ಮಂಜ:ಕಲ್ಮಂಜ ಗ್ರಾಮ‌ಪಂಚಾಯತ್ ನ 2024-25’ನೇ ಸಾಲಿನ ಮೊದಲ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ವಿಮಲ ಇವರ ಅಧ್ಯಕ್ಷತೆಯಲ್ಲಿ ಆ.16 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಪಶು ವೈದ್ಯಾಧಿಕಾರಿ ವಿಶ್ವನಾಥ ಸಿ.ಎನ್ ಅವರು ಗ್ರಾಮಸಭೆಯನ್ನು ಮುನ್ನಡೆಸಿದರು.

ಹಲವಡೆ ನೀರಿನ ಪೈಪುಗಳು ಒಡೆದು ಹೋಗಿ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುವುದಿಲ್ಲ ಎಂದು ಗ್ರಾಮಸ್ಥರೊರ್ವರು ತಿಳಿಸಿದರು.

ಸಿಎ ಬ್ಯಾಂಕ್ ಮತ್ತು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ನಿರ್ಮಿಸಲು ಕಲ್ಮಂಜದಲ್ಲಿ ಸರಕಾರಿ ಜಾಗವಿದೇಯೇ ಎಂದು ಗ್ರಾಮಸ್ಥರು ಕಂದಾಯ ಇಲಾಖಾ ಅಧಿಕಾರಿಯಲ್ಲಿ ತಿಳಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಲ್ಲರನ್ನು ಸ್ವಾಗತಿಸಿ,ಸಭೆಗೆ ವರದಿ ಮಂಡಿಸಿದರು. ಕಾರ್ಯದರ್ಶಿ ಸರೋಜಿನಿ ಕೆ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಯನ್ನು ಸಭೆಯ ಮುಂದಿಟ್ಟರು.

ರಾಧಾಕೃಷ್ಣ ಗೌಡ, ಲೀಲಾ, ಸವಿತಾ, ಪ್ರವೀಣ, ವರದಾಕ್ಷ ಆಚಾರ್ಯ, ಎಂ.ಶ್ರೀಧರ,ಕೃಷ್ಣಮೂರ್ತಿ, ಶೋಭಾವತಿ ಉಪಸ್ಥಿತರಿದ್ದರು.

ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ,ಆಶಾ ಕಾರ್ಯಕರ್ತರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಂಭ್ರಮದ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸತೀಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!