24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

ಕಲ್ಮಂಜ:ಕಲ್ಮಂಜ ಗ್ರಾಮ‌ಪಂಚಾಯತ್ ನ 2024-25’ನೇ ಸಾಲಿನ ಮೊದಲ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ವಿಮಲ ಇವರ ಅಧ್ಯಕ್ಷತೆಯಲ್ಲಿ ಆ.16 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಪಶು ವೈದ್ಯಾಧಿಕಾರಿ ವಿಶ್ವನಾಥ ಸಿ.ಎನ್ ಅವರು ಗ್ರಾಮಸಭೆಯನ್ನು ಮುನ್ನಡೆಸಿದರು.

ಹಲವಡೆ ನೀರಿನ ಪೈಪುಗಳು ಒಡೆದು ಹೋಗಿ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುವುದಿಲ್ಲ ಎಂದು ಗ್ರಾಮಸ್ಥರೊರ್ವರು ತಿಳಿಸಿದರು.

ಸಿಎ ಬ್ಯಾಂಕ್ ಮತ್ತು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ನಿರ್ಮಿಸಲು ಕಲ್ಮಂಜದಲ್ಲಿ ಸರಕಾರಿ ಜಾಗವಿದೇಯೇ ಎಂದು ಗ್ರಾಮಸ್ಥರು ಕಂದಾಯ ಇಲಾಖಾ ಅಧಿಕಾರಿಯಲ್ಲಿ ತಿಳಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಲ್ಲರನ್ನು ಸ್ವಾಗತಿಸಿ,ಸಭೆಗೆ ವರದಿ ಮಂಡಿಸಿದರು. ಕಾರ್ಯದರ್ಶಿ ಸರೋಜಿನಿ ಕೆ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಯನ್ನು ಸಭೆಯ ಮುಂದಿಟ್ಟರು.

ರಾಧಾಕೃಷ್ಣ ಗೌಡ, ಲೀಲಾ, ಸವಿತಾ, ಪ್ರವೀಣ, ವರದಾಕ್ಷ ಆಚಾರ್ಯ, ಎಂ.ಶ್ರೀಧರ,ಕೃಷ್ಣಮೂರ್ತಿ, ಶೋಭಾವತಿ ಉಪಸ್ಥಿತರಿದ್ದರು.

ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ,ಆಶಾ ಕಾರ್ಯಕರ್ತರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Suddi Udaya

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಪ್ರೊ.ಎಸ್ ಪ್ರಭಾಕರ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Suddi Udaya

ಅಳದಂಗಡಿ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಉಜಿರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

Suddi Udaya
error: Content is protected !!