25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

ಕಲ್ಮಂಜ:ಕಲ್ಮಂಜ ಗ್ರಾಮ‌ಪಂಚಾಯತ್ ನ 2024-25’ನೇ ಸಾಲಿನ ಮೊದಲ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ವಿಮಲ ಇವರ ಅಧ್ಯಕ್ಷತೆಯಲ್ಲಿ ಆ.16 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಪಶು ವೈದ್ಯಾಧಿಕಾರಿ ವಿಶ್ವನಾಥ ಸಿ.ಎನ್ ಅವರು ಗ್ರಾಮಸಭೆಯನ್ನು ಮುನ್ನಡೆಸಿದರು.

ಹಲವಡೆ ನೀರಿನ ಪೈಪುಗಳು ಒಡೆದು ಹೋಗಿ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುವುದಿಲ್ಲ ಎಂದು ಗ್ರಾಮಸ್ಥರೊರ್ವರು ತಿಳಿಸಿದರು.

ಸಿಎ ಬ್ಯಾಂಕ್ ಮತ್ತು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ನಿರ್ಮಿಸಲು ಕಲ್ಮಂಜದಲ್ಲಿ ಸರಕಾರಿ ಜಾಗವಿದೇಯೇ ಎಂದು ಗ್ರಾಮಸ್ಥರು ಕಂದಾಯ ಇಲಾಖಾ ಅಧಿಕಾರಿಯಲ್ಲಿ ತಿಳಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಲ್ಲರನ್ನು ಸ್ವಾಗತಿಸಿ,ಸಭೆಗೆ ವರದಿ ಮಂಡಿಸಿದರು. ಕಾರ್ಯದರ್ಶಿ ಸರೋಜಿನಿ ಕೆ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಯನ್ನು ಸಭೆಯ ಮುಂದಿಟ್ಟರು.

ರಾಧಾಕೃಷ್ಣ ಗೌಡ, ಲೀಲಾ, ಸವಿತಾ, ಪ್ರವೀಣ, ವರದಾಕ್ಷ ಆಚಾರ್ಯ, ಎಂ.ಶ್ರೀಧರ,ಕೃಷ್ಣಮೂರ್ತಿ, ಶೋಭಾವತಿ ಉಪಸ್ಥಿತರಿದ್ದರು.

ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ,ಆಶಾ ಕಾರ್ಯಕರ್ತರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆ

Suddi Udaya

ದಿನಸಿ‌ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ, ವೇಣೂರು ಪೊಲೀಸರಿಂದ ದಾಳಿ: ಅಂಗಡಿ ಮಾಲೀಕ‌ನ ವಿರುದ್ದ ಕೇಸು ದಾಖಲು

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನ ಆಚರಣೆ

Suddi Udaya

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಳದಂಗಡಿ ಸ.ಪ್ರೌ. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಧರ್ಮಸ್ಥಳ ನೇತ್ರಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ “ಯಾತ್ರಾ ಆತಿಥ್ಯ” ಲೋಕಾರ್ಪಣೆ

Suddi Udaya
error: Content is protected !!