September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

ಕಲ್ಮಂಜ:ಕಲ್ಮಂಜ ಗ್ರಾಮ‌ಪಂಚಾಯತ್ ನ 2024-25’ನೇ ಸಾಲಿನ ಮೊದಲ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ವಿಮಲ ಇವರ ಅಧ್ಯಕ್ಷತೆಯಲ್ಲಿ ಆ.16 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಪಶು ವೈದ್ಯಾಧಿಕಾರಿ ವಿಶ್ವನಾಥ ಸಿ.ಎನ್ ಅವರು ಗ್ರಾಮಸಭೆಯನ್ನು ಮುನ್ನಡೆಸಿದರು.

ಹಲವಡೆ ನೀರಿನ ಪೈಪುಗಳು ಒಡೆದು ಹೋಗಿ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುವುದಿಲ್ಲ ಎಂದು ಗ್ರಾಮಸ್ಥರೊರ್ವರು ತಿಳಿಸಿದರು.

ಸಿಎ ಬ್ಯಾಂಕ್ ಮತ್ತು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ನಿರ್ಮಿಸಲು ಕಲ್ಮಂಜದಲ್ಲಿ ಸರಕಾರಿ ಜಾಗವಿದೇಯೇ ಎಂದು ಗ್ರಾಮಸ್ಥರು ಕಂದಾಯ ಇಲಾಖಾ ಅಧಿಕಾರಿಯಲ್ಲಿ ತಿಳಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಲ್ಲರನ್ನು ಸ್ವಾಗತಿಸಿ,ಸಭೆಗೆ ವರದಿ ಮಂಡಿಸಿದರು. ಕಾರ್ಯದರ್ಶಿ ಸರೋಜಿನಿ ಕೆ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಯನ್ನು ಸಭೆಯ ಮುಂದಿಟ್ಟರು.

ರಾಧಾಕೃಷ್ಣ ಗೌಡ, ಲೀಲಾ, ಸವಿತಾ, ಪ್ರವೀಣ, ವರದಾಕ್ಷ ಆಚಾರ್ಯ, ಎಂ.ಶ್ರೀಧರ,ಕೃಷ್ಣಮೂರ್ತಿ, ಶೋಭಾವತಿ ಉಪಸ್ಥಿತರಿದ್ದರು.

ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ,ಆಶಾ ಕಾರ್ಯಕರ್ತರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಜಯಂತ್ ಟಿ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!