23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಪಡಂಗಡಿ: ವರಮಹಾಲಕ್ಷ್ಮಿ ಪೂಜಾ ಸಮಿತಿ ರಾಷ್ಟ್ರಸೇವಿತಾ ಸಮಿತಿ . ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಪಡಂಗಡಿ ಇದರ ಸಹಯೋಗದೋಂದಿಗೆ ಆ.16 ರಂದು ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ವೃತ ಪೂಜೆಯು ತಂತ್ರಿಗಳಾದ ಮುಂಡೂರು ಗೋಪಾಲ ಕೃಷ್ಣ ಭಟ್ ಮಾಲಾಡಿ ಅವರ ನೇತ್ರತ್ವದಲ್ಲಿ ಜರಗಿತು.

ಮಧ್ಯಾಹ್ನ ರಕ್ಷಾ ಬಂಧನ ಹಾಗೂ ಧಾರ್ಮಿಕ ಸಭೆ ನಡೆಯಿತು. ಧಾರ್ಮಿಕ‌ ಉಪನ್ಯಾಸಕರಾಗಿ ಮಾನನೀಯ ಮೀನಾಕ್ಷಿ ಹೊಯ್ಸಳ ಪ್ರಾಂತ ಸಹ ಬೌದ್ಧಿಕ್ ಪ್ರಮುಖ್ ರಾಷ್ಟ್ರ ಸೇವಿಕಾ ಸಮಿತಿ ಅವರು ವರಮಹಾಲಕ್ಷ್ಮಿ ವ್ರತದ ಬಗ್ಗೆ ಉಪನ್ಯಾಸ ನೀಡಿದರು. ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸಂಘಕರು ಶೀಲಾ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸುಮಲತಾ ಸಂಪತ್ ಸುವರ್ಣ ಉಪಸ್ಥಿತರಿದ್ದರು. ದಿವ್ಯ ಆಚಾರ್ಯ ಸ್ವಾಗತಿಸಿ ಸುಗುಣ ರಾವ್ ಕಾರ್ಯಕ್ರಮ ನಿರೂಪಿಸಿದರು. ಆಶಾ ಆಚಾರ್ಯ ಧನ್ಯವಾದವಿತ್ತರು.

ಕುವೆಟ್ಟು, ಓಡಿಲ್ನಾಳ, ಪಡಂಗಡಿ, ಸೋಣಂದೂರು ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರ್: ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತರಬೇತಿ ಕಾರ್ಯಾಗಾರ, ಸಾಧಕರಿಗೆ ಸನ್ಮಾನ

Suddi Udaya

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

Suddi Udaya

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

Suddi Udaya

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!