ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಪಡಂಗಡಿ: ವರಮಹಾಲಕ್ಷ್ಮಿ ಪೂಜಾ ಸಮಿತಿ ರಾಷ್ಟ್ರಸೇವಿತಾ ಸಮಿತಿ . ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಪಡಂಗಡಿ ಇದರ ಸಹಯೋಗದೋಂದಿಗೆ ಆ.16 ರಂದು ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ವೃತ ಪೂಜೆಯು ತಂತ್ರಿಗಳಾದ ಮುಂಡೂರು ಗೋಪಾಲ ಕೃಷ್ಣ ಭಟ್ ಮಾಲಾಡಿ ಅವರ ನೇತ್ರತ್ವದಲ್ಲಿ ಜರಗಿತು.

ಮಧ್ಯಾಹ್ನ ರಕ್ಷಾ ಬಂಧನ ಹಾಗೂ ಧಾರ್ಮಿಕ ಸಭೆ ನಡೆಯಿತು. ಧಾರ್ಮಿಕ‌ ಉಪನ್ಯಾಸಕರಾಗಿ ಮಾನನೀಯ ಮೀನಾಕ್ಷಿ ಹೊಯ್ಸಳ ಪ್ರಾಂತ ಸಹ ಬೌದ್ಧಿಕ್ ಪ್ರಮುಖ್ ರಾಷ್ಟ್ರ ಸೇವಿಕಾ ಸಮಿತಿ ಅವರು ವರಮಹಾಲಕ್ಷ್ಮಿ ವ್ರತದ ಬಗ್ಗೆ ಉಪನ್ಯಾಸ ನೀಡಿದರು. ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸಂಘಕರು ಶೀಲಾ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸುಮಲತಾ ಸಂಪತ್ ಸುವರ್ಣ ಉಪಸ್ಥಿತರಿದ್ದರು. ದಿವ್ಯ ಆಚಾರ್ಯ ಸ್ವಾಗತಿಸಿ ಸುಗುಣ ರಾವ್ ಕಾರ್ಯಕ್ರಮ ನಿರೂಪಿಸಿದರು. ಆಶಾ ಆಚಾರ್ಯ ಧನ್ಯವಾದವಿತ್ತರು.

ಕುವೆಟ್ಟು, ಓಡಿಲ್ನಾಳ, ಪಡಂಗಡಿ, ಸೋಣಂದೂರು ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya

ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಛಾಯಾಗ್ರಹಕ‌ ರಾಮಕೃಷ್ಣ ರೈ ಅವರಿಗೆ ಸನ್ಮಾನ

Suddi Udaya

ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

Suddi Udaya
error: Content is protected !!