April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

ಬೆಳ್ತಂಗಡಿ: ಆ 15 ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಹ್ಯೂಮನಿಟೆರಿಯನ್ ದಿನದ ಪ್ರಯುಕ್ತ ಹ್ಯೂಮನಿಟೆರಿಯನ್ ಸಂಸ್ಥೆ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಫಾ. ಆದರ್ಶ್ ಜೋಸೆಫ್ ಅವರಿಗೆ ” ಹ್ಯೂಮನಿಟೀರಿಯನ್ ಎಕ್ಸಲೆನ್ಸ್ ಅವಾರ್ಡ್ 2024 ” ನೀಡಿ ಗೌರವಿಸಲಾಯಿತ್ತು.

ಕೇಂದ್ರ ಸರಕಾರದ ಮಾಜಿ ಸಚಿವ ಸಂತೋಷ್ ಬಗ್ರೋಡಿಯಾ ಹಾಗೂ ಕಿರುತೆರೆ ತಾರೆ ಸುರೇಂದ್ರ ಪಾಲ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಕೋವಿಡ್ 19 ರ ಸಂದರ್ಭದಲ್ಲಿ ಗ್ರಾಮ ಮಟ್ಟದಲ್ಲಿ ಮಾಡಿದ ಸಮಾಜಸೇವೆಯನ್ನು ಸಂಸ್ಥೆ ಶ್ಲಾಘಸಿದರು. ತನ್ನ ವೈಯಕ್ತಿಕ ವಾಹನದಲ್ಲಿ ನೂರಕ್ಕೂ ಅಧಿಕ ಕೋವಿಡ್ ರೋಗಿಗಳನ್ನು ಆಸ್ಪತ್ರೆ ಹಾಗೂ ಕೋವಿಡ್ ಸೆಂಟರ್ ಗಳಿಗೆ ಉಚಿತವಾಗಿ ರವಾನೆ ಮಾಡುವುದರ ಮೂಲಕ ಹಲವಾರು ಜನರ ಪ್ರಾಣ ಉಳಿಸುವಲ್ಲಿ ಯಶ್ವಸಿಯಾದರು. ಅದು ಅಲ್ಲದೆ ಹತ್ತು ಹಲವಾರು ಸಮಾಜಮುಖಿ ಕಾರ್ಯಕ್ರಮದಲ್ಲಿ ತನ್ನನೇ ತೊಡಗಿಸಿಕೊಂಡು ಜಾತಿ, ಧರ್ಮ ವ್ಯತ್ಯಾಸವಿಲ್ಲದೆ ಮಾಡುವ ಮಾನವ ಸೇವೆಯನ್ನು ಸಂಸ್ಥೆ ಗುರುತಿಸಿಕೊಂಡರು. ಧರ್ಮದ ಅಂತರ ಬಿಟ್ಟು ಎಲ್ಲರನ್ನು ಒಟ್ಟುಸೇರಿಸಿ ಸಮಾಜದಲ್ಲಿ ಸಾಮರಸ್ಯ ಬೆಳೆಸಬೇಕೆಂಬ ಉದ್ದೇಶದಿಂದ ಹಲವಾರು ಕಾರ್ಯಕ್ರಮದ ಮೂಲಕ ಸೌಹಾರ್ದತೆಯ ಸಂದೇಶವನ್ನು ಸಮಾಜಕ್ಕೆ ಸಾರುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಾರೆ.

ಪ್ರಸ್ತುತ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಗುತ್ತಿಗಾರು ಹಾಗೂ ನೆಟ್ಟಣ ಚರ್ಚಿನ ಧರ್ಮಗುರುಗಳಾಗಿ ಸೇವೆ ಸಲ್ಲಿಸುತಾರೆ.

Related posts

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya
error: Content is protected !!